3:56 AM Tuesday11 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಬರೆಯ ಬೇಕಿದ್ದ ನ್ಯಾಯಾಂಗ ಸೇವೆ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ನ್ಯಾಯವಾದಿ!: ಹೈಕೋರ್ಟು ವಿಶೇಷ ಅನುಮತಿ ನೀಡಲು ಕಾರಣ ಏನು ಗೊತ್ತೇ?

20/11/2023, 10:52

ಮಂಗಳೂರು(reporterkarnataka.com): ಮಂಗಳೂರಿನ ತುಂಬು ಗರ್ಭಿಣಿ ನ್ಯಾಯವಾದಿಯೊಬ್ಬರು ಬೆಂಗಳೂರಿನಲ್ಲಿ ಬರೆಯಬೇಕಿದ್ದ ನ್ಯಾಯಾಂಗ ಸೇವೆಗೆ ಸಂಬಂಧಿಸಿದ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ಅತೀ ವಿರಳ ಘಟನೆಯೊಖದಕ್ಕೆ ಕಡಲನಗರಿ ಸಾಕ್ಷಿಯಾಯಿತು.
ನ್ಯಾಯಾಂಗ ಸೇವೆಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯವಾದಿ ನೇತ್ರಾವತಿ ಅವರು ಬರೆಯಬೇಕಿತ್ತು. ಆದರೆ ಪರೀಕ್ಷೆಯ ಕೇಂದ್ರ ಬೆಂಗಳೂರಿನಲ್ಲಿ ಇತ್ತು. ನೇತ್ರಾವತಿ ಅವರು
ಎಂಟುವರೆ ತಿಂಗಳ ತುಂಬು ಗರ್ಭಿಣಿಯಾಗಿರುವುದರಿಂದಬೆಂಗಳೂರಿಗೆ ತೆರಳಿ ಪರೀಕ್ಷೆ ಬರೆಯಲು ಸಾಧ್ಯವಿರಲಿಲ್ಲ. ಆದುದರಿಖದ ಅವರು ಮಂಗಳೂರಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಂಬಂಧಿಸಿದ ಹೈಕೋರ್ಟ್‌ನ ಸಮಿತಿಯು ಈ ಅರ್ಜಿಯನ್ನು ಪುರಸ್ಕರಿಸಿ ಅಭ್ಯರ್ಥಿಯ ಮನವಿಯಂತೆ ಮಂಗಳೂರಿನಲ್ಲೇ ಪರೀಕ್ಷೆ ಬರೆಯಲು ಅನುಮತಿ ನೀಡಿತ್ತು.
ರಾಜ್ಯ ಹೈಕೋರ್ಟ್‌ನ ವಿಶೇಷ ಅನುಮತಿ ಹಿನ್ನೆಲೆಯಲ್ಲಿ ನೇತ್ರಾವತಿ ನ್ಯಾಯಾಂಗ ಸೇವೆಯ ಮುಖ್ಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯಾಲಯದ ಸಂಕೀರ್ಣದ ಕಟ್ಟಡದಲ್ಲಿ ಶನಿವಾರ ಮತ್ತು ಭಾನುವಾರ ಪರೀಕ್ಷೆ ಬರೆದಿದ್ದಾರೆ. ನೇತ್ರಾವತಿ ಅವರು ತುಂಬು ಗರ್ಭಿಣಿಯಾಗಿರುವುದರಿಂದ ನ್ಯಾಯಾಲಯದ ಆವರಣದಲ್ಲಿ ಆ್ಯಂಬುಲೆನ್ಸ್ ವಾಹನವನ್ನು ಸಜ್ಜುಗೊಳಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು