10:45 PM Saturday6 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಮುಳಿಯ ಜ್ಯುವೆಲ್ಸ್ ನಿಂದ ಕನ್ನಡ ಕಾರ್ಯಕ್ರಮ: ವಿವಿಧ ನೃತ್ಯ ಸ್ಪರ್ಧೆ

30/11/2024, 15:29

ಬೆಂಗಳೂರು(reporterkarnataka.com): ಮುಳಿಯ ಜ್ಯುವೆಲ್ಸ್ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ ” ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಾಣಬಹುದು” ಎಂದರು. ಇನ್ನೋರ್ವ ಅಥಿತಿ, ಮಿಸೆಸ್ ಯುನಿವರ್ಸ ಸತ್ಯವತಿ ಬಸವರಾಜು ಶುಭ ಹಾರೈಸಿದರು.
ಅಧ್ಯಕ್ಷ ಸ್ಥಾನದಲ್ಲಿ ಮಾತನಾಡಿದ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ “ಮುಳಿಯದ ವಿಶೇಷ ಡಿಸೈನ್ ಗಳ ಮಾರಾಟದ ಜೊತೆಗೆ ಸಾಮಾಜಿಕ ಕಳಕಳಿ ಇರುವುದು ವಿಶೇಷ” ಎಂದರು.
ಈ ಕಾರ್ಯಕ್ರಮ ಸಂಧ್ಯಾ ಜಯರಾಮ್ ಅವರ ಸಹಯೋಗದಲ್ಲಿ ನಡೆಯಿತು . ಸಮಾರೋಪ ಸಮಾರಂಭದಲ್ಲಿ ಚಿತ್ರ ನಟ ಸ್ಮೈಲ್ ಶಿವು ಹಾಗೂ ಕಾಸಿಯಾದ ಗೌರವ ಕಾರ್ಯದರ್ಶಿ, ಉದ್ಯಮಿ ಸುರೇಶ್ ಎನ್. ಸಾಗರ್ ವೇದಿಕೆಯಲ್ಲಿದ್ದು, ವಿಜೇತರಿಗೆ ಬಹುಮಾನ ವಿತರಿಸಿದರು.

ಮುಳಿಯ ಪ್ರಬಂಧಕರಾದ ಎನ್.ಸುಬ್ರಮಣ್ಯ ಭಟ್, ಸಂಜೀವ, ಶಾಮ್, ಸತೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು