6:46 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಮುಳಿಯ ಜ್ಯುವೆಲ್ಸ್ ನಿಂದ ಕನ್ನಡ ಕಾರ್ಯಕ್ರಮ: ವಿವಿಧ ನೃತ್ಯ ಸ್ಪರ್ಧೆ

30/11/2024, 15:29

ಬೆಂಗಳೂರು(reporterkarnataka.com): ಮುಳಿಯ ಜ್ಯುವೆಲ್ಸ್ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ ” ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಾಣಬಹುದು” ಎಂದರು. ಇನ್ನೋರ್ವ ಅಥಿತಿ, ಮಿಸೆಸ್ ಯುನಿವರ್ಸ ಸತ್ಯವತಿ ಬಸವರಾಜು ಶುಭ ಹಾರೈಸಿದರು.
ಅಧ್ಯಕ್ಷ ಸ್ಥಾನದಲ್ಲಿ ಮಾತನಾಡಿದ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ “ಮುಳಿಯದ ವಿಶೇಷ ಡಿಸೈನ್ ಗಳ ಮಾರಾಟದ ಜೊತೆಗೆ ಸಾಮಾಜಿಕ ಕಳಕಳಿ ಇರುವುದು ವಿಶೇಷ” ಎಂದರು.
ಈ ಕಾರ್ಯಕ್ರಮ ಸಂಧ್ಯಾ ಜಯರಾಮ್ ಅವರ ಸಹಯೋಗದಲ್ಲಿ ನಡೆಯಿತು . ಸಮಾರೋಪ ಸಮಾರಂಭದಲ್ಲಿ ಚಿತ್ರ ನಟ ಸ್ಮೈಲ್ ಶಿವು ಹಾಗೂ ಕಾಸಿಯಾದ ಗೌರವ ಕಾರ್ಯದರ್ಶಿ, ಉದ್ಯಮಿ ಸುರೇಶ್ ಎನ್. ಸಾಗರ್ ವೇದಿಕೆಯಲ್ಲಿದ್ದು, ವಿಜೇತರಿಗೆ ಬಹುಮಾನ ವಿತರಿಸಿದರು.

ಮುಳಿಯ ಪ್ರಬಂಧಕರಾದ ಎನ್.ಸುಬ್ರಮಣ್ಯ ಭಟ್, ಸಂಜೀವ, ಶಾಮ್, ಸತೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು