1:28 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Bangaluru | ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ಮೇಲಿನ 40 ಪರ್ಸೆಂಟ್ ಕಮಿಷನ್ ಆರೋಪ: ತನಿಖಾ ಆಯೋಗದಿಂದ ಕ್ಲೀನ್ ಚಿಟ್ ?

04/04/2025, 17:31

ಬೆಂಗಳೂರು(reporterkarnataka.com)ಬಸವರಾಜ ಬೊಮ್ಮಾಯಿ ನೇತೃತ್ವದ ಈ ಹಿಂದಿನ
ಬಿಜೆಪಿ ಸರ್ಕಾರದ ಮೇಲಿನ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಯಾವುದೇ ಹುರುಳಿಲ್ಲವೆಂದು ತನಿಖಾ ಆಯೋಗ ಕ್ಲೀನ್ ಚಿಟ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದಿನ ಬಿಜೆಪಿ ಸರಕಾರದ ಮೇಲಿನ 40 ಪರ್ಸೆಂಟ್ ಆರೋಪದ ತನಿಖೆಗೆ ನ್ಯಾ. ನಾಗಮೋಹನ್ ದಾಸ್ ಸಮಿತಿ ನೇಮಿಸಿತ್ತು. ಇದೀಗ ತನಿಖಾ ಆಯೋಗ ಸರ್ಕಾರಕ್ಕೆ ವರದಿ ನೀಡಿದ್ದು, ಅದರಲ್ಲಿ ಹಿಂದಿನ ಬಿಜೆಪಿ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ ಎನ್ನಲಾಗಿದೆ.
ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪ ಸಾಬೀತು ಪಡಿಸಲು ಬಲವಾದ ಸಾಕ್ಷ್ಯ ಇಲ್ಲ. ಗುತ್ತಿಗೆದಾರರ ಆರೋಪಗಳಿಗೆ ಯಾವುದೇ ಪುರಾವೆ, ದಾಖಲೆಗಳಿಲ್ಲ, ಗುತ್ತಿಗೆದಾರರು ಕೊಟ್ಟ ದಾಖಲೆ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಪೂರಕವಾಗಿ ಯಾವುದೇ ಸಾಕ್ಷ್ಯಗಳಿಲ್ಲಎಂದು ವರದಿಯಲ್ಲಿ ಹೇಳಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು