2:07 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬೆಂಗಳೂರು ಬಳಿಕ ಮಲೆನಾಡು ಕಂಬಳಕ್ಕೆ ಭರದ ಸಿದ್ಧತೆ: 2025 ಏಪ್ರಿಲ್ 19, 20ರಂದು ಶಿವಮೊಗ್ಗದಲ್ಲಿ ಕರಾವಳಿಯ ಜಾನಪದ ಕ್ರೀಡೆ

19/08/2024, 22:00

ಮಂಗಳೂರು(reporterkarnataka.com): ಕರಾವಳಿಯ ಹೆಸರಾಂತ ಜಾನಪದ ಕ್ರೀಡೆ ಕಂಬಳ ಕಳೆದ ವರ್ಷ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನೆರವೇರಿದ ಬಳಿಕ ಇದೇ ಮೊದಲ ಬಾರಿಗೆ ಮಲೆನಾಡಿಗೂ ವಿಸ್ತರಿಸಲು ಸನ್ನದ್ಧವಾಗಿದ್ದು, ಅದಕ್ಕಾಗಿ ಈಗಲೇ ಪೂರಕ ಸಿದ್ಧತೆ ನಡೆದಿದೆ.


ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ, ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3181 ಮತ್ತು 3182 ಹಾಗೂ ಶಿವಮೊಗ್ಗ ಕಂಬಳ ಸಮಿತಿಯನ್ನು ರಚಿಸಿ ಇದರ ಸಹಯೋಗದೊಂದಿಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ 2025ರ ಏಪ್ರಿಲ್ 19 ಮತ್ತು 20ರಂದು ಆಯೋಜಿಸಲಾಗುವುದು ಎಂದು ದ.ಕ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರಾವಳಿ ಕರ್ನಾಟಕದ ಜಾನಪದ ಕ್ರೀಡೆಯನ್ನು ವಿಶ್ವ ಪಾರಂಪರಿಕ ತಾಣವಾದ ಶಿವಮೊಗ್ಗದಲ್ಲಿ ನಡೆಸಲು ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸೇರಿದಂತೆ ಎಲ್ಲರ ಪೂರಕ ನೆರವು ಪಡೆಯಲಾಗುವುದು. ಶಿವಮೊಗ್ಗ, ಹಾಸನ, ಮಡಿಕೇರಿ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬೈಂದೂರು, ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಸಹಭಾಗಿತ್ವದಲ್ಲಿ ಅದ್ಧೂರಿಯಾಗಿ ಕಂಬಳ ನಡೆಸಲಾಗುವುದು ಎಂದರು.
ಕಂಬಳಕ್ಕೆ ಬೇಕಾದ ವ್ಯವಸ್ಥೆ ಬಗ್ಗೆ ನಮ್ಮ ತಂಡ ಶಿವಮೊಗ್ಗಕ್ಕೆ ತೆರಳಿ ಪರಿಶೀಲನೆ ನಡೆಸಲಿದೆ. ಅತ್ಯಂತ ಶಿಸ್ತುಬದ್ಧವಾಗಿ ನಡೆಯಲಿದೆ ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
*ಈ ಬಾರಿ 25 ಕಂಬಳ:*
ಕರಾವಳಿಯಲ್ಲಿ ಈ ಬಾರಿ 25 ಕಂಬಳ ಆಯೋಜಿಸಲು ತೀರ್ಮಾನಿಸಲಾಗಿದೆ. ದಿನಾಂಕವನ್ನೂ ನಿಗದಿ ಮಾಡಲಾಗಿದೆ ಎಂದರು.
ಕಂಬಳ ಸಮಿತಿಯ ಭಾಸ್ಕರ ಕೋಟ್ಯಾನ್, ಜಿ.ಆರ್. ಶೆಟ್ಟಿ, ಅರುಣ್ ಶೆಟ್ಟಿ, ರೋಟರಿಯ ಜಗನ್ನಾಥ್ ಕೋಟೆ, ರಾಜ್ ಗೋಪಾಲ ರೈ, ವಿಕ್ರಂ ದತ್, ಇಲಿಯಾಸ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು