1:06 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ

04/01/2025, 09:28

ಬೆಂಗಳೂರು(reporterkarnataka.com): ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಶ್ಚಿಮ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ ಬೀದಿ ಬದಿ ವ್ಯಾಪಾರಿಗಳು, ವ್ಯಾಪಾರ ವಲಯವನ್ನು ಗುರುತಿಸುವವರೆಗೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಮನವಿ ಮಾಡಿದರು.
ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಪಶ್ಚಿಮ ವಲಯದಲ್ಲಿ ಈಗಾಗಲೇ ಸುಮಾರು 7000 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಪಾಲಿಕೆ ವತಿಯಿಂದ ವೆಂಡಿಂಗ್ ಜೋನ್‌ಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಈ ಸಂಬಂಧ ವೆಂಡಿಂಗ್ ಜೋನ್ ಗುರುತಿಸುವವರೆಗೆ ಯಾವ್ಯಾವ ರಸ್ತೆಗಳಲ್ಲಿ ವ್ಯಾಪಾರ ಮಾಡಬಹುದು ಎಂಬುದನ್ನು ಪರಿಶೀಲಿಸಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
*ಮಾರ್ಕ್ ಮಾಡಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ:*
ಯಾವ್ಯಾವ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಸ್ತರು ವ್ಯಾಪಾರ ಮಾಡಬಹುದು ಎಂಬುದನ್ನು ಗುರುತಿಸಬೇಕು. ಅನಂತರ ಪಾದಚಾರಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಪಾದಚಾರಿ ಮಾರ್ಗದಲ್ಲಿ ಮಾರ್ಕಿಂಗ್ ಮಾಡಿ(ಗಡಿ ಗುರುತಿಸಿ) ಅವರಿಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡಲು ಸೂಚನೆ ನೀಡಿದರು.
*ಶಾಶ್ವತ ಪೆಟ್ಟಿಗೆಗಳನ್ನು ತೆರವುಗೊಳಿಸಿ:*
ಪಾದಚಾರಿ ಮಾರ್ಗದಲ್ಲಿ ಶಾಶ್ವತ ಪೆಟ್ಟಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರೆ ಅದನ್ನು ಕೂಡಲೆ ತೆರವುಗೊಳಿಸಬೇಕು. ಪಾದಚಾರಿಗಳ ಓಡಾಟಕ್ಕೆ ಅವಕಾಶವಿರಬೇಕು. ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವಂತಿಲ್ಲ. ಇದರ ಜೊತೆಗೆ ಪಾದಚಾರಿ ಮಾರ್ಗದಲ್ಲಿ ಬರುವ ಅಂಗಡಿ/ಮುಂಗಟ್ಟುಗಳ ಮುಂಭಾಗದ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿರುವುದನ್ನು ಪರಿಶೀಲಿಸಿ ತೆರವುಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
*ವಿದ್ಯುತ್ ಚಿತಾಗಾರಕ್ಕೆ ಪ್ರಸ್ತಾವನೆ ಸಲ್ಲಿಸಿ:*
ಚಾಮರಾಜಪೇಟೆಯ ಟಿ.ಆರ್.ಮಿಲ್ ಬಳಿಯ ರುದ್ರಭೂಮಿಯು ಸುಮಾರು 3 ಎಕರೆ ಪ್ರದೇಶದಲ್ಲಿದ್ದು, ವಿದ್ಯತ್ ಚಿತಾಗಾರ ನಿರ್ಮಾಣ ಮಾಡಿದರೆ ಸ್ಥಳೀಯರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿ, ವಿದ್ಯತ್ ಚಿತಾಗಾರ ಮಾಡುವ ಸಲುವಾಗಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
*90ಕ್ಕೂ ಹೆಚ್ಚು ಅಹವಾಲುಗಳ ಸ್ವೀಕಾರ:*
ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಇಂದು ನಾಗರಿಕರಿಂದ ಒಟ್ಟಾರೆ 90ಕ್ಕೂ ಹೆಚ್ಚು ಅಹವಾಲನ್ನು ಸ್ವೀಕರಿಸಿ, ಎಲ್ಲಾ ದೂರುಗಳನ್ನು ತ್ವರಿತವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ವಲಯ ಆಯುಕ್ತರಾದ ಅರ್ಚನಾ, ವಲಯ ಜಂಟಿ ಆಯುಕ್ತರಾದ ಸಂಗಪ್ಪ, ಉಪ ಆಯುಕ್ತರಾದ ಶ್ರೀನಿವಾಸ್, ಮುಖ್ಯ ಅಭಿಯಂತರರಾದ ಶಶಿ ಕುಮಾರ್, ಕಾರ್ಯಪಾಲಕ ಅಭಿಯಂತರರು, ಪಾಲಿಕೆ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು