ಇತ್ತೀಚಿನ ಸುದ್ದಿ
ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
30/04/2026, 21:24
ನವದೆಹಲಿ(reporterkarnataka.com): ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು 7 ಮಂದಿ ಮೃತಪಟ್ಟಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಕನ್ನಡದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ’ ಎಂದಿದ್ದಾರೆ.












