6:16 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬೆಂಗಳೂರು: ಬ್ಯಾರೀಸ್ ಸೆಂಟ್ರಲ್ ಕಮಿಟಿ ಹಾಗೂ ಮಂಗಳೂರು ಬ್ಲಡ್ ಡೋನರ್ಸ್ ನಿಂದ ಬೃಹತ್ ರಕ್ತದಾನ ಶಿಬಿರ

12/08/2024, 22:41

ಬೆಂಗಳೂರು(reporterkarnataka.com): ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಂಗಳೂರು ಇದರ ಸಹಯೋಗದದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು ಇದರ 456ನೇ ಬೃಹತ್ ರಕ್ತದಾನ ಶಿಬಿರವು ಬೆಂಗಳೂರಿನ ಗಾಂಧಿನಗರದ ಕೆ ಜಿ ಸರ್ಕಲ್ ಬಳಿ ನಡೆಯಿತು.


ಮುಂಜಾನೆಯಿಂದ ಮಧ್ಯಾಹ್ನದ ತನಕ ನಡೆದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ ಸಾರ್ವಜನಿಕರು ಬಹಳ ಉತ್ಸಾಹದಿಂದಲೇ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾದರು. ತುರ್ತು ಕರೆಗೆ ತಕ್ಷಣವೇ ಸ್ಪಂದಿಸಿ ಸಿಂಗಲ್ ಡೋನರ್ ಪ್ಲೇಟ್ಲೆಟ್ ರಕ್ತವನ್ನು ದಾನ ಮಾಡಿದ ಸಾಮಾಜಿಕ ಕಾರ್ಯಕರ್ತ ರಹೀಮ್ಚಿಕ್ಕಪೇಟೆ ಅವರನ್ನು ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ಅಧ್ಯಕ್ಷರಾದ ಉದ್ಯಮಿ ಶಬೀರ್ ಬ್ರಿಗೇಡ್, ಬಿಸಿಸಿಯ ಪ್ರಧಾನ ಕಾರ್ಯದರ್ಶಿ ನಾಸಿರ್ ಕೆಂಪಿ, ನ್ಯಾಯವಾದಿಗಳಾದ ಅಥಾವುಲ್ಲಾ ಪುಂಜಾಲಕಟ್ಟೆ, ಬಿಸಿಸಿಯ ವೇದ್ಯಕೀಯ ಉಸ್ತುವಾರಿ ಬದ್ರುದ್ದೀನ್, ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಗೌರವಾಧ್ಯಕ್ಷರಾದ ಸಿದ್ದೀಕ್ ಮಂಜೇಶ್ವರ, ಅಧ್ಯಕ್ಷರಾದ ನವಾಝ್ ಕಲ್ಲರಕೋಡಿ, ಬಿಡಿಎಂ ಉಪಾಧ್ಯಕ್ಷರಾದ ಅಶ್ರಫ್ ಸಿ. ಎಂ., ಪ್ರಧಾನ ಕಾರ್ಯದರ್ಶಿಗಳಾದ ಶಾಹುಲ್ ಹಮೀದ್ ಕಾಶೀಪಟ್ನ ಹಾಗೂ ಬ್ಯಾರೀಸ್ ಸೆಂಟ್ರಲ್ ಕಮಿಟಿ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು