3:27 PM Sunday30 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಬೆಂಗಳೂರು: 68 ಪರಿಸರಸ್ನೇಹಿ ವಾಹನಕ್ಕೆ ಮುಖ್ಯಮಂತ್ರಿ ಚಾಲನೆ

06/10/2025, 19:53

ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಿ: ಖಂಡ್ರೆ

ಹಸಿರು ಪಟಾಕಿ ಮಾರುವುದಾಗಿ ಮುಚ್ಚಳಿಕೆ ಬರೆಸಿಕೊಳ್ಳಿ:ಈಶ್ವರ ಖಂಡ್ರೆ

ಬೆಂಗಳೂರು(reporterkarnataka.com): ಪಟಾಕಿ ಮಳಿಗೆ ಮಾಲೀಕರಿಂದ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ.


ವಿಧಾನಸೌಧದ ಮೆಟ್ಟಿಲುಗಳ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಡಳಿಯ ಅಧ್ಯಕ್, ನರೇಂದ್ರ ಸ್ವಾಮಿ ಅವರೊಂದಿಗೆ 68 ಪರಿಸರ ಸ್ನೇಹಿ(ಇವಿ) ವಾಹನಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡುವವರ ಪರವಾನಗಿ ರದ್ದುಪಡಿಸಲು ಕ್ರಮ ವಹಿಸುವಂತೆ ಸೂಚಿಸಿದರು.
15 ವರ್ಷ ಪೂರೈಸಿದ ಡಿಸೆಲ್ ವಾಹನಗಳನ್ನು ಬಳಕೆ ಮಾಡುವಂತಿಲ್ಲ. ಅದನ್ನು ಸ್ಕ್ರ್ಯಾಪ್ ನೀತಿಯಂತೆ ಬಳಕೆಯಿಂದ ದೂರವಿಡಬೇಕು. ಮಂಡಳಿಯಲ್ಲಿ ವಾಹನಗಳ ಕೊರತೆಯಿಂದ ಏಕ ಬಳಕೆ ಪ್ಲಾಸ್ಟಿಕ್, ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ವಿಲೇವಾರಿ ಘಟಕಗಳ ಮೇಲೆ ನಿಗಾ ಇಡಲು ಮತ್ತು ಏಕ ಬಳಕೆ ಪ್ಲಾಸ್ಟಿಕ್ ತಯಾರಿಕಾ ಘಟಕ, ಮಳಿಗೆಗಳ ತಪಾಸಣೆ, ಪರಿಶೀಲನೆ ಮಾಡಲು, ಜಲ ಮೂಲಗಳ ಗುಣಮಟ್ಟ ಪರೀಕ್ಷೆ ಮಾಡಲು ಅಡ್ಡಿಯಾಗುತ್ತಿತ್ತು. ಈ ನಿಟ್ಟಿನಲ್ಲಿ 68 ಇವಿ ವಾಹನಗಳಿಗೆ ಮಂಡಳಿ ಕಳುಹಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದರು.
ಈ ವಾಹನಗಳನ್ನು ಸದ್ಬಳಕೆ ಮಾಡಿಕೊಂಡು, ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಪರಿಸರ ಸಂರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಮಂಡಳಿಯ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು