1:33 AM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಬೆಂಗಳೂರು: 68 ಪರಿಸರಸ್ನೇಹಿ ವಾಹನಕ್ಕೆ ಮುಖ್ಯಮಂತ್ರಿ ಚಾಲನೆ

06/10/2025, 19:53

ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಿ: ಖಂಡ್ರೆ

ಹಸಿರು ಪಟಾಕಿ ಮಾರುವುದಾಗಿ ಮುಚ್ಚಳಿಕೆ ಬರೆಸಿಕೊಳ್ಳಿ:ಈಶ್ವರ ಖಂಡ್ರೆ

ಬೆಂಗಳೂರು(reporterkarnataka.com): ಪಟಾಕಿ ಮಳಿಗೆ ಮಾಲೀಕರಿಂದ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ.


ವಿಧಾನಸೌಧದ ಮೆಟ್ಟಿಲುಗಳ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಡಳಿಯ ಅಧ್ಯಕ್, ನರೇಂದ್ರ ಸ್ವಾಮಿ ಅವರೊಂದಿಗೆ 68 ಪರಿಸರ ಸ್ನೇಹಿ(ಇವಿ) ವಾಹನಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡುವವರ ಪರವಾನಗಿ ರದ್ದುಪಡಿಸಲು ಕ್ರಮ ವಹಿಸುವಂತೆ ಸೂಚಿಸಿದರು.
15 ವರ್ಷ ಪೂರೈಸಿದ ಡಿಸೆಲ್ ವಾಹನಗಳನ್ನು ಬಳಕೆ ಮಾಡುವಂತಿಲ್ಲ. ಅದನ್ನು ಸ್ಕ್ರ್ಯಾಪ್ ನೀತಿಯಂತೆ ಬಳಕೆಯಿಂದ ದೂರವಿಡಬೇಕು. ಮಂಡಳಿಯಲ್ಲಿ ವಾಹನಗಳ ಕೊರತೆಯಿಂದ ಏಕ ಬಳಕೆ ಪ್ಲಾಸ್ಟಿಕ್, ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ವಿಲೇವಾರಿ ಘಟಕಗಳ ಮೇಲೆ ನಿಗಾ ಇಡಲು ಮತ್ತು ಏಕ ಬಳಕೆ ಪ್ಲಾಸ್ಟಿಕ್ ತಯಾರಿಕಾ ಘಟಕ, ಮಳಿಗೆಗಳ ತಪಾಸಣೆ, ಪರಿಶೀಲನೆ ಮಾಡಲು, ಜಲ ಮೂಲಗಳ ಗುಣಮಟ್ಟ ಪರೀಕ್ಷೆ ಮಾಡಲು ಅಡ್ಡಿಯಾಗುತ್ತಿತ್ತು. ಈ ನಿಟ್ಟಿನಲ್ಲಿ 68 ಇವಿ ವಾಹನಗಳಿಗೆ ಮಂಡಳಿ ಕಳುಹಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದರು.
ಈ ವಾಹನಗಳನ್ನು ಸದ್ಬಳಕೆ ಮಾಡಿಕೊಂಡು, ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಪರಿಸರ ಸಂರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಮಂಡಳಿಯ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು