3:09 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೆಂಗಳೂರು ಕೂಲ್ ಕೂಲ್: ಶೀತ ಮಾರುತದಿಂದ ತತ್ತರಿಸಿದ ರಾಜಧಾನಿ ಜನತೆ: ಉತ್ತರ ಕರ್ನಾಟಕದಲ್ಲೂ ಗಡಗಡ ಚಳಿ

20/12/2025, 23:12

ಬೆಂಗಳೂರು(reporterkarnataka.com): ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಮಾರುತ ತೀವ್ರಗೊಂಡಿದ್ದು, ಇನ್ನೆರಡು ದಿನ ಮುಂದುವರಿಯುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಕವಿದಿದ್ದು, ಬೆಳಗ್ಗಿನ ಪ್ರಯಾಣದ ಮೇಲೆ ಪರಿಣಾಮ ಬೀರಿದೆ. ಜನರು ಶೀತ ಮಾರುತದಿಂದ ಸಂಕಷ್ಟ ಅನುಭವಿಸಬೇಕಾಯಿತು.
ಉತ್ತರ ಕರ್ನಾಟಕದ ಹಲವು‌ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಗಮನಾರ್ಹ ಇಳಿಕೆ ಕಂಡಿದೆ. ಬೆಳಗಾವಿ, ವಿಜಯಪುರ ಶೀತ ಮಾರುತದ ಬಾಧೆಗೆ ಒಳಗಾಗಿದೆ. ಮುಂಜಾನೆ ಸಮಯದಲ್ಲಿ ಮನೆಯೊಳಗೆ ಬೆಚ್ಚಗಿರಲು ಮತ್ತು ಜಾಗರೂಕರಾಗಿರಲು ನಿವಾಸಿಗಳಿಗೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್ ಆಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನವು 27 ಡಿಗ್ರಿ ಸೆಲ್ಸಿಯಸ್ ತಲುಪಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು