3:23 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬೆಂಗಳೂರು: ಕೊರೊನಾದಿಂದ ಸಾವನ್ನಪ್ಪಿ 15 ತಿಂಗಳು ಕಳೆದರೂ ವಿಲೇವಾರಿಯಾಗದ ಶವಗಳು!!

29/11/2021, 19:17

ಬೆಂಗಳೂರು(reporterkarnataka.com): ಕೊರೊನಾ ಜಗತ್ತುನ್ನು ಕಾಡುತಿದ್ದರೆ ಮಾನವೀಯತೆ ಮರೆತ ಅದೆಷ್ಟೋ ಪ್ರಸಂಗಗಳು ಎದುರಾಗುತ್ತಿದೆ. ಇದೊಂದು ಮಾನವೀಯತೆ ಮರೆತ ಪ್ರಕರಣ ರಾಜ್ಯದ ನಿದ್ದೆಗೆಡಿಸಿದೆ. ಬೆಂಗಳೂರಿನ ರಾಜಾಜಿನಗರದ ಇಎಸ್ ಐ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದ ವಿಧವೆ ಸಹಿತ ಇಬ್ಬರ ಮೃತದೇಹಗಳು ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ 15 ತಿಂಗಳ ಕಾಲ ಅಂತ್ಯಸಂಸ್ಕಾರವನ್ನೂ ಕಾಣದೆ ಶವಾಗಾರದಲ್ಲಿ ಕೊಳೆಯುತ್ತಿದ್ದ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ.

ಎರಡು ಶವಗಳು ಕೊಳೆತ ಸ್ಥಿತಿಯಲ್ಲಿದ್ದರಿಂದ ಮುಖ ಚಹರೆ ಸಿಗದೆ ದೊಡ್ಡ ತಲೆನೋವಾಗಿತ್ತು. ಕೊನೆಗೆ ಒಂದೂವರೆ ವರ್ಷದಿಂದ ಮೃತರಾದವರ ಪಟ್ಟಿ ಮತ್ತು ಹಸ್ತಾಂತರ ಮಾಡಿದ ಶವಗಳ ವಿವರವನ್ನು ಸುದೀರ್ಘವಾಗಿ ಪರಿಶೀಲನೆ ನಡೆಸಿದಾಗ ಚಾಮರಾಜಪೇಟೆಯ ವಿಧವೆ ದುರ್ಗಾ ಮತ್ತು ಕೆ.ಪಿ. ಅಗ್ರಹಾರದ ಮುನಿರಾಜು ಎಂಬುದು ಗೊತ್ತಾಗಿದೆ. ಪೊಲೀಸರು, ದುರ್ಗಾ ಅವರ ಅಣ್ಣನ ಮೊಬೈಲ್ ನಂಬರ್ ಪಡೆದು ಕರೆ ಮಾಡಿ ವಿಷಯ ಮುಟ್ಟಿಸಿದರೂ ಪ್ರಯೋಜನವಾಗಿಲ್ಲ. ಮತ್ತೊಂದೆಡೆ ಮುನಿರಾಜು ಕಡೆಯವರ್ಯಾರೂ ಸಂಪರ್ಕಕಕ್ಕೆ ಸಿಕ್ಕಿಲ್ಲ. ಹೀಗಾಗಿ ರಾಜಾಜಿನಗರ ಪೊಲೀಸರು ಸೋಮವಾರ ಕೆ.ಪಿ. ಅಗ್ರಹಾರಕ್ಕೆ ಭೇಟಿ ಕೊಟ್ಟು ಮುನಿರಾಜು ಅವರ ಪಾಲಕರು ಮತ್ತು ಸಂಬಂಧಿಕರ ಬಗ್ಗೆ ಮಾಹಿತಿ ಕಲೆ ಹಾಕಲು ನಿರ್ಧರಿಸಿದ್ದಾರೆ.

ದಾಖಲೆ ಪರಿಶೀಲಿಸಿದಾಗ ಮೃತರ ಗುರುತು ಗೊತ್ತಾಗಿದೆ. ವಿಳಾಸ ಮತ್ತು ಸಂಬಂಧಿಕರ ಮೊಬೈಲ್ ನಂಬರ್ ಪಡೆದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು