4:04 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಭೀಕರ ಬೆಂಕಿ ಅನಾಹುತ; ಗೋದಾಮು ಮತ್ತು 8 ಮನೆಗಳು ಭಸ್ಮ

18/09/2023, 17:16

ಬೆಂಗಳೂರು(reporterkarnataka.com): ನಗರದ ಚಾಮರಾಜಪೇಟೆಯ ಅನಂತಪುರದ ಬಳಿ
ಸಿಲಿಂಡರ್ ಸ್ಫೋಟಗೊಂಡು ಗೋದಾಮು ಮತ್ತು 8 ಮನೆಗಳು ಭಸ್ಮಗೊಂಡಿರುವ ಘಟನೆ ನಡೆದಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಬೆಂಗಳೂರಿನ ವಿನಾಯಕ ಸಿನೆಮಾ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದ್ದು,
ಸಿಲಿಂಡರ್‌ ಸ್ಪೋಟದ ಭೀಕರತೆಗೆ ಅಲಂಕಾರಿಕ ವಸ್ತುಗಳ ಗೋದಾಮು ಮತ್ತು 8 ತಗಡಿನ ಶೀಟ್ ಮನೆಗಳು ಭಸ್ಮವಾಗಿವೆ. ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿಶಾಮಕ ದಳ ಬೆಂಕಿ ನದಿಸುವ ಕಾರ್ಯ ಮಾಡಿದ್ದಾರೆ. ಈ ಅವಘಡದಲ್ಲಿ ಗೋದಾಮು ಸೇರಿದಂತೆ ಪಕ್ಕದಲ್ಲಿರುವ 8 ಮನೆಗಳಿಗೂ ಬೆಂಕಿ ತಗುಲಿದ್ದು, ಈ ವೇಳೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ವಿನಾಯಕ ಸಿನಿಮಾ ಥಿಯೇಟರ್‌ ಎದುರುಗಡೆ ಇರುವ ಗೋದಾಮಿಗೆ ಬೆಂಕಿ ತಲುಗಿದ ಹಿನ್ನೆಲೆ ಸಿಲಿಂಡರ್‌ಗಳು ಬ್ಲಾಸ್ಟ್ ಆಗಿರಬಹುದು ಎಂದು ಶಂಕಿಸಲಾಗುತ್ತಿದೆ. ಅಲ್ಲದೆ ಮನೆಯ ಅಲಂಕಾರಿಕ ವಸ್ತುಗಳ ಗೋದಾಮಿಗೆ ಬೆಂಕಿ ತಗುಲಿದ್ದು, ಬೆಂಕಿ ತಗಲುತ್ತಿದ್ದಂತೆ ಅದರ ಪಕ್ಕದಲ್ಲಿರುವ ಸುಮಾರು 8 ಶೀಟ್ ಮನೆಗಳಿಗೂ ಬೆಂಕಿ ಆವರಿಸಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು