10:22 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಭೀಕರ ಬೆಂಕಿ ಅನಾಹುತ; ಗೋದಾಮು ಮತ್ತು 8 ಮನೆಗಳು ಭಸ್ಮ

18/09/2023, 17:16

ಬೆಂಗಳೂರು(reporterkarnataka.com): ನಗರದ ಚಾಮರಾಜಪೇಟೆಯ ಅನಂತಪುರದ ಬಳಿ
ಸಿಲಿಂಡರ್ ಸ್ಫೋಟಗೊಂಡು ಗೋದಾಮು ಮತ್ತು 8 ಮನೆಗಳು ಭಸ್ಮಗೊಂಡಿರುವ ಘಟನೆ ನಡೆದಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಬೆಂಗಳೂರಿನ ವಿನಾಯಕ ಸಿನೆಮಾ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದ್ದು,
ಸಿಲಿಂಡರ್‌ ಸ್ಪೋಟದ ಭೀಕರತೆಗೆ ಅಲಂಕಾರಿಕ ವಸ್ತುಗಳ ಗೋದಾಮು ಮತ್ತು 8 ತಗಡಿನ ಶೀಟ್ ಮನೆಗಳು ಭಸ್ಮವಾಗಿವೆ. ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿಶಾಮಕ ದಳ ಬೆಂಕಿ ನದಿಸುವ ಕಾರ್ಯ ಮಾಡಿದ್ದಾರೆ. ಈ ಅವಘಡದಲ್ಲಿ ಗೋದಾಮು ಸೇರಿದಂತೆ ಪಕ್ಕದಲ್ಲಿರುವ 8 ಮನೆಗಳಿಗೂ ಬೆಂಕಿ ತಗುಲಿದ್ದು, ಈ ವೇಳೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ವಿನಾಯಕ ಸಿನಿಮಾ ಥಿಯೇಟರ್‌ ಎದುರುಗಡೆ ಇರುವ ಗೋದಾಮಿಗೆ ಬೆಂಕಿ ತಲುಗಿದ ಹಿನ್ನೆಲೆ ಸಿಲಿಂಡರ್‌ಗಳು ಬ್ಲಾಸ್ಟ್ ಆಗಿರಬಹುದು ಎಂದು ಶಂಕಿಸಲಾಗುತ್ತಿದೆ. ಅಲ್ಲದೆ ಮನೆಯ ಅಲಂಕಾರಿಕ ವಸ್ತುಗಳ ಗೋದಾಮಿಗೆ ಬೆಂಕಿ ತಗುಲಿದ್ದು, ಬೆಂಕಿ ತಗಲುತ್ತಿದ್ದಂತೆ ಅದರ ಪಕ್ಕದಲ್ಲಿರುವ ಸುಮಾರು 8 ಶೀಟ್ ಮನೆಗಳಿಗೂ ಬೆಂಕಿ ಆವರಿಸಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು