9:05 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಬೆಂಗಳೂರಿಗೆ ಹೋಗುವುದಾಗಿ ತೆರಳಿದ ಮಹಿಳೆ 3 ಮಂದಿ ಮಕ್ಕಳ ಜತೆ ನಾಪತ್ತೆ: ಪತ್ತೆಗಾಗಿ ಮನವಿ

23/07/2021, 22:12

ಮಂಗಳೂರು(reporterkarnataka news): ಕೂಲಿ ಕೆಲಸಕ್ಕೆಂದು ಬಂದಿದ್ದ ಬಿಹಾರ ಮೂಲದ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ.

ಸುಭದ್ರಾದೇವಿ (32) ಕಾಣೆಯಾದ ಮಹಿಳೆ. ಬಿಹಾರದ ಬಗಲಪುರ ನಿವಾಸಿಯಾದ ಇವರು ಕೂಲಿ ಕೆಲಸಕ್ಕೆಂದು ತಮ್ಮ ಪತಿ ನೀರಜ್ ಚೌಧರಿಯೊಂದಿಗೆ ಪಚ್ಚನಾಡಿ ಗ್ರಾಮದ, “ಟೂ ಎಕರ್ಸ್” ಗೆ ಬಂದಿದ್ದರು.

ಸುಭದ್ರಾದೇವಿ, ಮೂರು ಮಂದಿ ಮಕ್ಕಳೊಂದಿಗೆ ಜುಲೈ 14 ರಂದು ಬೆಂಗಳೂರಿಗೆ ಹೋಗುವುದಾಗಿ ತೆರಳಿದವರು, ಬೆಂಗಳೂರಿಗೆ ಹೋಗದೇ, ತಮ್ಮ ಸ್ವಂತ ಊರಿಗೂ ಹೋಗದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರು 5 ಅಡಿ ಎತ್ತರವಿದ್ದು, ಗೋಧಿ ಮೈ ಬಣ್ಣ, ಕೆನ್ನೆಯಲ್ಲಿ ಕಪ್ಪು ಎಳ್ಳು ಗಾತ್ರದ ಮಚ್ಚೆ, ಮೂಗುತ್ತಿ ಧರಿಸಿರುತ್ತಾಳೆ. ಹಿಂದಿ ಹಾಗೂ ಬಿಹಾರಿ ಮಾತನಾಡುತ್ತಾರೆ.  

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಗೂ ದೂರವಾಣಿ: 0824-2220535 ಸಂಪರ್ಕಿಸುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು