11:58 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಬೆಂಗಳೂರಿಗೆ ಹೋಗುವುದಾಗಿ ತೆರಳಿದ ಮಹಿಳೆ 3 ಮಂದಿ ಮಕ್ಕಳ ಜತೆ ನಾಪತ್ತೆ: ಪತ್ತೆಗಾಗಿ ಮನವಿ

23/07/2021, 22:12

ಮಂಗಳೂರು(reporterkarnataka news): ಕೂಲಿ ಕೆಲಸಕ್ಕೆಂದು ಬಂದಿದ್ದ ಬಿಹಾರ ಮೂಲದ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ.

ಸುಭದ್ರಾದೇವಿ (32) ಕಾಣೆಯಾದ ಮಹಿಳೆ. ಬಿಹಾರದ ಬಗಲಪುರ ನಿವಾಸಿಯಾದ ಇವರು ಕೂಲಿ ಕೆಲಸಕ್ಕೆಂದು ತಮ್ಮ ಪತಿ ನೀರಜ್ ಚೌಧರಿಯೊಂದಿಗೆ ಪಚ್ಚನಾಡಿ ಗ್ರಾಮದ, “ಟೂ ಎಕರ್ಸ್” ಗೆ ಬಂದಿದ್ದರು.

ಸುಭದ್ರಾದೇವಿ, ಮೂರು ಮಂದಿ ಮಕ್ಕಳೊಂದಿಗೆ ಜುಲೈ 14 ರಂದು ಬೆಂಗಳೂರಿಗೆ ಹೋಗುವುದಾಗಿ ತೆರಳಿದವರು, ಬೆಂಗಳೂರಿಗೆ ಹೋಗದೇ, ತಮ್ಮ ಸ್ವಂತ ಊರಿಗೂ ಹೋಗದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರು 5 ಅಡಿ ಎತ್ತರವಿದ್ದು, ಗೋಧಿ ಮೈ ಬಣ್ಣ, ಕೆನ್ನೆಯಲ್ಲಿ ಕಪ್ಪು ಎಳ್ಳು ಗಾತ್ರದ ಮಚ್ಚೆ, ಮೂಗುತ್ತಿ ಧರಿಸಿರುತ್ತಾಳೆ. ಹಿಂದಿ ಹಾಗೂ ಬಿಹಾರಿ ಮಾತನಾಡುತ್ತಾರೆ.  

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಗೂ ದೂರವಾಣಿ: 0824-2220535 ಸಂಪರ್ಕಿಸುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು