5:09 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಬೆಂಗಳೂರಿಗೆ ಹೋಗುವುದಾಗಿ ತೆರಳಿದ ಮಹಿಳೆ 3 ಮಂದಿ ಮಕ್ಕಳ ಜತೆ ನಾಪತ್ತೆ: ಪತ್ತೆಗಾಗಿ ಮನವಿ

23/07/2021, 22:12

ಮಂಗಳೂರು(reporterkarnataka news): ಕೂಲಿ ಕೆಲಸಕ್ಕೆಂದು ಬಂದಿದ್ದ ಬಿಹಾರ ಮೂಲದ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ.

ಸುಭದ್ರಾದೇವಿ (32) ಕಾಣೆಯಾದ ಮಹಿಳೆ. ಬಿಹಾರದ ಬಗಲಪುರ ನಿವಾಸಿಯಾದ ಇವರು ಕೂಲಿ ಕೆಲಸಕ್ಕೆಂದು ತಮ್ಮ ಪತಿ ನೀರಜ್ ಚೌಧರಿಯೊಂದಿಗೆ ಪಚ್ಚನಾಡಿ ಗ್ರಾಮದ, “ಟೂ ಎಕರ್ಸ್” ಗೆ ಬಂದಿದ್ದರು.

ಸುಭದ್ರಾದೇವಿ, ಮೂರು ಮಂದಿ ಮಕ್ಕಳೊಂದಿಗೆ ಜುಲೈ 14 ರಂದು ಬೆಂಗಳೂರಿಗೆ ಹೋಗುವುದಾಗಿ ತೆರಳಿದವರು, ಬೆಂಗಳೂರಿಗೆ ಹೋಗದೇ, ತಮ್ಮ ಸ್ವಂತ ಊರಿಗೂ ಹೋಗದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರು 5 ಅಡಿ ಎತ್ತರವಿದ್ದು, ಗೋಧಿ ಮೈ ಬಣ್ಣ, ಕೆನ್ನೆಯಲ್ಲಿ ಕಪ್ಪು ಎಳ್ಳು ಗಾತ್ರದ ಮಚ್ಚೆ, ಮೂಗುತ್ತಿ ಧರಿಸಿರುತ್ತಾಳೆ. ಹಿಂದಿ ಹಾಗೂ ಬಿಹಾರಿ ಮಾತನಾಡುತ್ತಾರೆ.  

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಗೂ ದೂರವಾಣಿ: 0824-2220535 ಸಂಪರ್ಕಿಸುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು