1:12 PM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ

04/10/2024, 20:27

ಬೆಂಗಳೂರು(reporterkarnataka.com):ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್‌.ಜಿ ಸಿದ್ದರಾಮಯ್ಯ ಎರಡು ದಿನಗಳ‌ ಕಾಲ‌ ಅಮೇರಿಗನ್ನಡ ದಂಪತಿ ದಿ‌.ಶಿಕಾರಿಪುರ ಹರಿಹರೇಶ್ವರ, ದಿ.ನಾಗಲಕ್ಷಿ ಸಂಸ್ಮರಣಾ ವೇದಿಕೆಯಲ್ಲಿ ನಡೆಯುವ ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನಕ್ಕೆ ಚಾಲನೆ ನೀಡಿದರು.
ಬಳಿಕ‌ ಮಾತನಾಡಿದ ಅವರು ಹೃದಯವಾಹಿನಿ ಬಳಗ ಇಪ್ಪತೈದು ವರ್ಷಗಳಿಂದ ನಾಲ್ವತೈದು ರಾಷ್ಟ್ರಗಳಲ್ಲಿ ಕನ್ನಡ ಸಮ್ಮೇಳನ ಅಯೋಜಿಸಿವ ಮೂಲಕ ಕನ್ನಡದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡದ ಸಾಂಸ್ಕೃತಿಕ ವಿಕಾಸಕ್ಕೆ ಪೂರಕವಾಗುವ ರೀತಿಯಲ್ಲಿ ಸಾಗರೋತ್ತರ ಭಾಗದಲ್ಲಿ ಇರುವ ಕನ್ನಡಿಗರನ್ನು ಸಂಘಟಿಸುತ್ತಾ ನಮ್ಮ ರಾಜ್ಯದಲ್ಲಿ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಅಯೋಜಿಸುವ ಮೂಲಕ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.


ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು‌.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ
ಸಿಂಗಾಪುರ ಕನ್ನಡ ಸಂಘದ ಮಾಜಿ ಅಧ್ಯಕ್ಷ ವಿ.ಟಿ ಶ್ರೀನಿವಾಸ್, ಕತ್ತಾರ್ ಕನ್ನಡ ಸಂಘದ ಮಾಜಿ ಅಧ್ಯಕ್ಷ ಅರವಿಂದ್ ಪಾಟೇಲ್, ಅಬುದಾಭಿ ಇಂಡಿಯಾ ಸೋಶಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ ನ ಮಿತ್ರಂಪಾಡಿ ಜಯರಾಮ ರೈ,ಸೌದಿ ಅರೇಬಿಯಾದ ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಬಜಾಲ್, ಕತ್ತಾರ್ ಕನ್ನಡ ಸಂಘದ ಅಧ್ಯಕ್ಷ ರವಿ ಶೆಟ್ಟಿ, ಅಮೇರಿಕಾದ ಡಾ.ಉಷಾ ಕೋಲ್ಪೆ, ಮಸ್ಕತ್ ಕನ್ನಡ ಸಂಘದ ಅಧ್ಯಕ್ಷ ಎಸ್‌.ಡಿ.ಟಿ ಪ್ರಸಾದ್, ಪರಿಸರ ಪ್ರೇಮಿ ಕನ್ನಡ ಸುರೇಶ್, ಅನ್ಸಾರ್ ಕಾಟಿಪಳ್ಳ ಮಸ್ಕತ್, ದಿವಾಕರ್ ಪೂಜಾರಿ ಕತ್ತಾರ್,
ಲಕ್ಷ್ಮೀ ಕೃಷ್ಣಮೂರ್ತಿ ಅಮೇರಿಕಾ, ಡಾ.ಸತ್ಯವತಿ ಕೆ.ಆರ್, ರವರಿಗೆ ನವ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅನಿವಾಸಿ ಕನ್ನಡಿಗರ ಕೋಶ ಇದರ ಕಾರ್ಯದರ್ಶಿ ಲಕ್ಷಮ್ಮಾ, ಬೆಂಗಳೂರು ಶೇಷಾದ್ರಿಪುರಂ ಎಜ್ಯುಕೇಶನ್ ಟ್ರಸ್ಟ್ ಗೌ.ಪ್ರ‌. ಕಾರ್ಯದರ್ಶಿ ನಾಡೋಜ ಡಾ.ವೂಡೆ ಪಿ. ಕೃಷ್ಣ, ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಡಾ.ಎಸ್.ರಾಮಾನುಜ, ಈಡನ್ ಗ್ಲೋಬಲ್ ಸ್ಕೂಲ್ ಅಧ್ಯಕ್ಷ ಆಶ್ರಫ್ ಷಾ. ಮಂತೂರು, ಸಲಹಾ ಸಮಿತಿ ನಿರ್ದೇಶಕ ಮೊಹಮ್ಮದ್ ರಫಿ ಪಾಷ, ತರಬೇತುದಾರ ರಫೀಕ್ ಮಾಸ್ಟರ್ ಅತೂರು ಉಪಸ್ಥಿತರಿದ್ದರು.
ಹಾಸ್ಯ ಕಲಾವಿದ ಮಹಾದೇವ್ ಸತ್ತ್‌ಗಿರಿ ರವರಿಂದ ಹಾಸ್ಯ ಕಾರ್ಯಕ್ರಮ ನಡೆಯಿತು.
ಹೃದಯ ವಾಹಿನಿಯ ಸ್ಥಾಪಕಾಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್ ಪ್ರಾಸ್ತಾವಿಕ ಮಾತುಗಳ್ನಾಡಿದರು.
ನೂರು ಸಮದ್ ಶಿವಮೊಗ್ಗ ಹಾಗೂ ಸವಿ ಪ್ರಕಾಶ್ ಮೈಸೂರು ಕಾರ್ಯಕ್ರಮ ನಿರೂಪಿಸಿದರು.
ಗೋ.ವಾನ ಸ್ವಾಮಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು