3:58 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ

04/10/2024, 20:27

ಬೆಂಗಳೂರು(reporterkarnataka.com):ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್‌.ಜಿ ಸಿದ್ದರಾಮಯ್ಯ ಎರಡು ದಿನಗಳ‌ ಕಾಲ‌ ಅಮೇರಿಗನ್ನಡ ದಂಪತಿ ದಿ‌.ಶಿಕಾರಿಪುರ ಹರಿಹರೇಶ್ವರ, ದಿ.ನಾಗಲಕ್ಷಿ ಸಂಸ್ಮರಣಾ ವೇದಿಕೆಯಲ್ಲಿ ನಡೆಯುವ ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನಕ್ಕೆ ಚಾಲನೆ ನೀಡಿದರು.
ಬಳಿಕ‌ ಮಾತನಾಡಿದ ಅವರು ಹೃದಯವಾಹಿನಿ ಬಳಗ ಇಪ್ಪತೈದು ವರ್ಷಗಳಿಂದ ನಾಲ್ವತೈದು ರಾಷ್ಟ್ರಗಳಲ್ಲಿ ಕನ್ನಡ ಸಮ್ಮೇಳನ ಅಯೋಜಿಸಿವ ಮೂಲಕ ಕನ್ನಡದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡದ ಸಾಂಸ್ಕೃತಿಕ ವಿಕಾಸಕ್ಕೆ ಪೂರಕವಾಗುವ ರೀತಿಯಲ್ಲಿ ಸಾಗರೋತ್ತರ ಭಾಗದಲ್ಲಿ ಇರುವ ಕನ್ನಡಿಗರನ್ನು ಸಂಘಟಿಸುತ್ತಾ ನಮ್ಮ ರಾಜ್ಯದಲ್ಲಿ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಅಯೋಜಿಸುವ ಮೂಲಕ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.


ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು‌.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ
ಸಿಂಗಾಪುರ ಕನ್ನಡ ಸಂಘದ ಮಾಜಿ ಅಧ್ಯಕ್ಷ ವಿ.ಟಿ ಶ್ರೀನಿವಾಸ್, ಕತ್ತಾರ್ ಕನ್ನಡ ಸಂಘದ ಮಾಜಿ ಅಧ್ಯಕ್ಷ ಅರವಿಂದ್ ಪಾಟೇಲ್, ಅಬುದಾಭಿ ಇಂಡಿಯಾ ಸೋಶಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ ನ ಮಿತ್ರಂಪಾಡಿ ಜಯರಾಮ ರೈ,ಸೌದಿ ಅರೇಬಿಯಾದ ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಬಜಾಲ್, ಕತ್ತಾರ್ ಕನ್ನಡ ಸಂಘದ ಅಧ್ಯಕ್ಷ ರವಿ ಶೆಟ್ಟಿ, ಅಮೇರಿಕಾದ ಡಾ.ಉಷಾ ಕೋಲ್ಪೆ, ಮಸ್ಕತ್ ಕನ್ನಡ ಸಂಘದ ಅಧ್ಯಕ್ಷ ಎಸ್‌.ಡಿ.ಟಿ ಪ್ರಸಾದ್, ಪರಿಸರ ಪ್ರೇಮಿ ಕನ್ನಡ ಸುರೇಶ್, ಅನ್ಸಾರ್ ಕಾಟಿಪಳ್ಳ ಮಸ್ಕತ್, ದಿವಾಕರ್ ಪೂಜಾರಿ ಕತ್ತಾರ್,
ಲಕ್ಷ್ಮೀ ಕೃಷ್ಣಮೂರ್ತಿ ಅಮೇರಿಕಾ, ಡಾ.ಸತ್ಯವತಿ ಕೆ.ಆರ್, ರವರಿಗೆ ನವ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅನಿವಾಸಿ ಕನ್ನಡಿಗರ ಕೋಶ ಇದರ ಕಾರ್ಯದರ್ಶಿ ಲಕ್ಷಮ್ಮಾ, ಬೆಂಗಳೂರು ಶೇಷಾದ್ರಿಪುರಂ ಎಜ್ಯುಕೇಶನ್ ಟ್ರಸ್ಟ್ ಗೌ.ಪ್ರ‌. ಕಾರ್ಯದರ್ಶಿ ನಾಡೋಜ ಡಾ.ವೂಡೆ ಪಿ. ಕೃಷ್ಣ, ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಡಾ.ಎಸ್.ರಾಮಾನುಜ, ಈಡನ್ ಗ್ಲೋಬಲ್ ಸ್ಕೂಲ್ ಅಧ್ಯಕ್ಷ ಆಶ್ರಫ್ ಷಾ. ಮಂತೂರು, ಸಲಹಾ ಸಮಿತಿ ನಿರ್ದೇಶಕ ಮೊಹಮ್ಮದ್ ರಫಿ ಪಾಷ, ತರಬೇತುದಾರ ರಫೀಕ್ ಮಾಸ್ಟರ್ ಅತೂರು ಉಪಸ್ಥಿತರಿದ್ದರು.
ಹಾಸ್ಯ ಕಲಾವಿದ ಮಹಾದೇವ್ ಸತ್ತ್‌ಗಿರಿ ರವರಿಂದ ಹಾಸ್ಯ ಕಾರ್ಯಕ್ರಮ ನಡೆಯಿತು.
ಹೃದಯ ವಾಹಿನಿಯ ಸ್ಥಾಪಕಾಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್ ಪ್ರಾಸ್ತಾವಿಕ ಮಾತುಗಳ್ನಾಡಿದರು.
ನೂರು ಸಮದ್ ಶಿವಮೊಗ್ಗ ಹಾಗೂ ಸವಿ ಪ್ರಕಾಶ್ ಮೈಸೂರು ಕಾರ್ಯಕ್ರಮ ನಿರೂಪಿಸಿದರು.
ಗೋ.ವಾನ ಸ್ವಾಮಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು