6:48 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ

04/10/2024, 20:27

ಬೆಂಗಳೂರು(reporterkarnataka.com):ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್‌.ಜಿ ಸಿದ್ದರಾಮಯ್ಯ ಎರಡು ದಿನಗಳ‌ ಕಾಲ‌ ಅಮೇರಿಗನ್ನಡ ದಂಪತಿ ದಿ‌.ಶಿಕಾರಿಪುರ ಹರಿಹರೇಶ್ವರ, ದಿ.ನಾಗಲಕ್ಷಿ ಸಂಸ್ಮರಣಾ ವೇದಿಕೆಯಲ್ಲಿ ನಡೆಯುವ ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನಕ್ಕೆ ಚಾಲನೆ ನೀಡಿದರು.
ಬಳಿಕ‌ ಮಾತನಾಡಿದ ಅವರು ಹೃದಯವಾಹಿನಿ ಬಳಗ ಇಪ್ಪತೈದು ವರ್ಷಗಳಿಂದ ನಾಲ್ವತೈದು ರಾಷ್ಟ್ರಗಳಲ್ಲಿ ಕನ್ನಡ ಸಮ್ಮೇಳನ ಅಯೋಜಿಸಿವ ಮೂಲಕ ಕನ್ನಡದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡದ ಸಾಂಸ್ಕೃತಿಕ ವಿಕಾಸಕ್ಕೆ ಪೂರಕವಾಗುವ ರೀತಿಯಲ್ಲಿ ಸಾಗರೋತ್ತರ ಭಾಗದಲ್ಲಿ ಇರುವ ಕನ್ನಡಿಗರನ್ನು ಸಂಘಟಿಸುತ್ತಾ ನಮ್ಮ ರಾಜ್ಯದಲ್ಲಿ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಅಯೋಜಿಸುವ ಮೂಲಕ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.


ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು‌.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ
ಸಿಂಗಾಪುರ ಕನ್ನಡ ಸಂಘದ ಮಾಜಿ ಅಧ್ಯಕ್ಷ ವಿ.ಟಿ ಶ್ರೀನಿವಾಸ್, ಕತ್ತಾರ್ ಕನ್ನಡ ಸಂಘದ ಮಾಜಿ ಅಧ್ಯಕ್ಷ ಅರವಿಂದ್ ಪಾಟೇಲ್, ಅಬುದಾಭಿ ಇಂಡಿಯಾ ಸೋಶಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ ನ ಮಿತ್ರಂಪಾಡಿ ಜಯರಾಮ ರೈ,ಸೌದಿ ಅರೇಬಿಯಾದ ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಬಜಾಲ್, ಕತ್ತಾರ್ ಕನ್ನಡ ಸಂಘದ ಅಧ್ಯಕ್ಷ ರವಿ ಶೆಟ್ಟಿ, ಅಮೇರಿಕಾದ ಡಾ.ಉಷಾ ಕೋಲ್ಪೆ, ಮಸ್ಕತ್ ಕನ್ನಡ ಸಂಘದ ಅಧ್ಯಕ್ಷ ಎಸ್‌.ಡಿ.ಟಿ ಪ್ರಸಾದ್, ಪರಿಸರ ಪ್ರೇಮಿ ಕನ್ನಡ ಸುರೇಶ್, ಅನ್ಸಾರ್ ಕಾಟಿಪಳ್ಳ ಮಸ್ಕತ್, ದಿವಾಕರ್ ಪೂಜಾರಿ ಕತ್ತಾರ್,
ಲಕ್ಷ್ಮೀ ಕೃಷ್ಣಮೂರ್ತಿ ಅಮೇರಿಕಾ, ಡಾ.ಸತ್ಯವತಿ ಕೆ.ಆರ್, ರವರಿಗೆ ನವ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅನಿವಾಸಿ ಕನ್ನಡಿಗರ ಕೋಶ ಇದರ ಕಾರ್ಯದರ್ಶಿ ಲಕ್ಷಮ್ಮಾ, ಬೆಂಗಳೂರು ಶೇಷಾದ್ರಿಪುರಂ ಎಜ್ಯುಕೇಶನ್ ಟ್ರಸ್ಟ್ ಗೌ.ಪ್ರ‌. ಕಾರ್ಯದರ್ಶಿ ನಾಡೋಜ ಡಾ.ವೂಡೆ ಪಿ. ಕೃಷ್ಣ, ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಡಾ.ಎಸ್.ರಾಮಾನುಜ, ಈಡನ್ ಗ್ಲೋಬಲ್ ಸ್ಕೂಲ್ ಅಧ್ಯಕ್ಷ ಆಶ್ರಫ್ ಷಾ. ಮಂತೂರು, ಸಲಹಾ ಸಮಿತಿ ನಿರ್ದೇಶಕ ಮೊಹಮ್ಮದ್ ರಫಿ ಪಾಷ, ತರಬೇತುದಾರ ರಫೀಕ್ ಮಾಸ್ಟರ್ ಅತೂರು ಉಪಸ್ಥಿತರಿದ್ದರು.
ಹಾಸ್ಯ ಕಲಾವಿದ ಮಹಾದೇವ್ ಸತ್ತ್‌ಗಿರಿ ರವರಿಂದ ಹಾಸ್ಯ ಕಾರ್ಯಕ್ರಮ ನಡೆಯಿತು.
ಹೃದಯ ವಾಹಿನಿಯ ಸ್ಥಾಪಕಾಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್ ಪ್ರಾಸ್ತಾವಿಕ ಮಾತುಗಳ್ನಾಡಿದರು.
ನೂರು ಸಮದ್ ಶಿವಮೊಗ್ಗ ಹಾಗೂ ಸವಿ ಪ್ರಕಾಶ್ ಮೈಸೂರು ಕಾರ್ಯಕ್ರಮ ನಿರೂಪಿಸಿದರು.
ಗೋ.ವಾನ ಸ್ವಾಮಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು