8:50 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ.ಬಿ. ಪಾಟೀಲ್ ಸಿದ್ಧತೆ ಪರಿಶೀಲನೆ

08/02/2025, 21:11

ಬೆಂಗಳೂರು(reporterkarnataka.com): ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು.


ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರಾತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು.
ಇದರಿಂದ ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.
ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್,
ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು