6:12 PM Thursday16 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ.ಬಿ. ಪಾಟೀಲ್ ಸಿದ್ಧತೆ ಪರಿಶೀಲನೆ

08/02/2025, 21:11

ಬೆಂಗಳೂರು(reporterkarnataka.com): ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು.


ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರಾತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು.
ಇದರಿಂದ ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.
ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್,
ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು