8:24 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ.ಬಿ. ಪಾಟೀಲ್ ಸಿದ್ಧತೆ ಪರಿಶೀಲನೆ

08/02/2025, 21:11

ಬೆಂಗಳೂರು(reporterkarnataka.com): ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು.


ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರಾತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು.
ಇದರಿಂದ ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.
ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್,
ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು