6:44 PM Sunday9 - November 2025
ಬ್ರೇಕಿಂಗ್ ನ್ಯೂಸ್
ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ

ಇತ್ತೀಚಿನ ಸುದ್ದಿ

ಬೆಂಗಳೂರು ಮಳೆ ಅನಾಹುತ: 2 ದಿನಗಳಲ್ಲಿ 691 ಮಂದಿ ಸಂತ್ರಸ್ತರ ಖಾತೆಗೆ ತಲಾ 25 ಸಾವಿರ ರೂ. ಪರಿಹಾರ

24/05/2022, 08:13

ಬೆಂಗಳೂರು(reporterkarnataka.com): ಮಳೆಹಾನಿ ಸಂತ್ರಸ್ತರ ಖಾತೆಗೆ ಎರಡು ದಿನಗಳಲ್ಲಿ ತಲಾ 25 ಸಾವಿರ ರೂ. ಪರಿಹಾರ ಜಮಾ ಮಾಡಲು ಸಚಿವ ಅಶ್ವತ್ಥನಾರಾಯಣ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ದಾವೋಸ್ ನಿಂದ ಸಚಿವ ಅಶ್ವತ್ಥನಾರಾಯಣ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, 2 ದಿನಗಳಲ್ಲಿ 691 ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿ ನೀಡುವಂತೆ ಸೂಚನೆ ನೀಡಿದ್ದಾರೆ. 

691 ಕುಟುಂಬಗಳಿಗೆ 1.73 ಕೋಟಿ ರೂಪಾಯಿಯನ್ನು ಸಂತ್ರಸ್ತರ ಖಾತೆಗೆ ವರ್ಗಾವಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂತ್ರಸ್ಥರ ಸಂಬಂಧಿಸಿದ ದಾಖಲೀಕರಣವನ್ನು ಮಂಗಳವಾರದೊಳಗೆ ಪೂರ್ಣಗೊಳಿಸಿ ಬುಧವಾರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾಯಿಸುವಂತೆ ಕಾಲಮಿತಿ ನಿಗದಿಪಡಿಸಿದ್ದಾರೆ.

ಪೂರ್ವ ವಲಯದಲ್ಲಿ 7 ಕಡೆ ಡೀಸಿಲ್ಟಿಂಗ್ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಕ್ಷಣ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ತಿಳಿಸಿದ್ದು, 20 ದಿನಗಳೊಳಗೆ ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀಲಸಂದ್ರ, ಸಂಜಯನಗರ ಸೇರಿದಂತೆ 22 ರೆಡ್ ಜೋನ್ ನಗಳಲ್ಲಿ ಸ್ಥಳಾಂತರಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು