3:24 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೆಂಗಳೂರು ಮಳೆ ಅನಾಹುತ: 2 ದಿನಗಳಲ್ಲಿ 691 ಮಂದಿ ಸಂತ್ರಸ್ತರ ಖಾತೆಗೆ ತಲಾ 25 ಸಾವಿರ ರೂ. ಪರಿಹಾರ

24/05/2022, 08:13

ಬೆಂಗಳೂರು(reporterkarnataka.com): ಮಳೆಹಾನಿ ಸಂತ್ರಸ್ತರ ಖಾತೆಗೆ ಎರಡು ದಿನಗಳಲ್ಲಿ ತಲಾ 25 ಸಾವಿರ ರೂ. ಪರಿಹಾರ ಜಮಾ ಮಾಡಲು ಸಚಿವ ಅಶ್ವತ್ಥನಾರಾಯಣ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ದಾವೋಸ್ ನಿಂದ ಸಚಿವ ಅಶ್ವತ್ಥನಾರಾಯಣ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, 2 ದಿನಗಳಲ್ಲಿ 691 ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿ ನೀಡುವಂತೆ ಸೂಚನೆ ನೀಡಿದ್ದಾರೆ. 

691 ಕುಟುಂಬಗಳಿಗೆ 1.73 ಕೋಟಿ ರೂಪಾಯಿಯನ್ನು ಸಂತ್ರಸ್ತರ ಖಾತೆಗೆ ವರ್ಗಾವಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂತ್ರಸ್ಥರ ಸಂಬಂಧಿಸಿದ ದಾಖಲೀಕರಣವನ್ನು ಮಂಗಳವಾರದೊಳಗೆ ಪೂರ್ಣಗೊಳಿಸಿ ಬುಧವಾರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾಯಿಸುವಂತೆ ಕಾಲಮಿತಿ ನಿಗದಿಪಡಿಸಿದ್ದಾರೆ.

ಪೂರ್ವ ವಲಯದಲ್ಲಿ 7 ಕಡೆ ಡೀಸಿಲ್ಟಿಂಗ್ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಕ್ಷಣ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ತಿಳಿಸಿದ್ದು, 20 ದಿನಗಳೊಳಗೆ ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀಲಸಂದ್ರ, ಸಂಜಯನಗರ ಸೇರಿದಂತೆ 22 ರೆಡ್ ಜೋನ್ ನಗಳಲ್ಲಿ ಸ್ಥಳಾಂತರಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು