6:17 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದ ವಿರಾಜಪೇಟೆಯ ವ್ಯಕ್ತಿಯ ಕಿಡ್ನಾಪ್; ಮಂಡ್ಯದಲ್ಲಿ ಮೂವರ ಬಂಧನ

22/11/2025, 19:20

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka@gmail.com

ಬೆಂಗಳೂರಿನ ಕೆಂಗೇರಿ ಬಳಿ ಬಸ್ ಗಾಗಿ ಕಾಯುತ್ತಿದ್ದ ವಿರಾಜಪೇಟೆ ಮೂಲದ ಅಬ್ದುಲ್ ಜಲೀಲ್ ಎಂಬಾತನನ್ನು ಕಿಡ್ನಾಪ್ ಮಾಡಿ ಹಣ, ಮೊಬೈಲ್ ದೋಚಿರುವ ಪ್ರಕರಣ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ಬಂಧಿತರನ್ನು ಕಿರಣ್, ಕುಶಾಲ್ ಬಾಬು ಮತ್ತು ಗೋಕುಲ್ ಎಂದು ಗುರುತಿಸಲಾಗಿದೆ. ಮೂವರೂ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು. ಕಾರಿನಲ್ಲಿ ಡ್ರಾಪ್ ಕೊಡುತೇವೆ ಎಂದು ಹೇಳಿ ಹತ್ತಿಸಿಕೊಂಡು, ಮಂಡ್ಯದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕುತ್ತಿಗೆಗೆ ಹಗ್ಗ ಹಾಕಿ ಬೆದರಿಸಿ ಹಣ, ಫೋನ್ ಮತ್ತು ನಗದು ದರೋಡೆ ಮಾಡುತ್ತಿದ್ದ ಗ್ಯಾಂಗ್ ಬಳಿಕ ಫೋನ್ ಪೇ ಮೂಲಕ ಹಣ ವರ್ಗಯಿಸಿಕೊಳ್ಳುತ್ತಿದ್ದರು. ಈ ಕೃತ್ಯಕ್ಕೆ ಹೊರ ರಾಜ್ಯದ ಕಾರನ್ನು ಬಾಡಿಗೆ ಪಡೆದು ದರೋಡೆ ನಡೆಸಲಾಗುತ್ತಿತ್ತು ಅಲ್ಲದೆ ಆಯಿಷಾರಾಮಿ ಜೀವನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ವಿರಾಜಪೇಟೆಯ ಜಲೀಲ್ ಮತ್ತು ಮೈಸೂರಿನ ಯತೀಂದ್ರ ಎಂಬುವವರ ಮೇಲೆ ನಡೆದ ದರೋಡೆ ಪ್ರಕರಣ ಆಧರಸಿ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು