9:43 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದ ವಿರಾಜಪೇಟೆಯ ವ್ಯಕ್ತಿಯ ಕಿಡ್ನಾಪ್; ಮಂಡ್ಯದಲ್ಲಿ ಮೂವರ ಬಂಧನ

22/11/2025, 19:20

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka@gmail.com

ಬೆಂಗಳೂರಿನ ಕೆಂಗೇರಿ ಬಳಿ ಬಸ್ ಗಾಗಿ ಕಾಯುತ್ತಿದ್ದ ವಿರಾಜಪೇಟೆ ಮೂಲದ ಅಬ್ದುಲ್ ಜಲೀಲ್ ಎಂಬಾತನನ್ನು ಕಿಡ್ನಾಪ್ ಮಾಡಿ ಹಣ, ಮೊಬೈಲ್ ದೋಚಿರುವ ಪ್ರಕರಣ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ಬಂಧಿತರನ್ನು ಕಿರಣ್, ಕುಶಾಲ್ ಬಾಬು ಮತ್ತು ಗೋಕುಲ್ ಎಂದು ಗುರುತಿಸಲಾಗಿದೆ. ಮೂವರೂ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು. ಕಾರಿನಲ್ಲಿ ಡ್ರಾಪ್ ಕೊಡುತೇವೆ ಎಂದು ಹೇಳಿ ಹತ್ತಿಸಿಕೊಂಡು, ಮಂಡ್ಯದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕುತ್ತಿಗೆಗೆ ಹಗ್ಗ ಹಾಕಿ ಬೆದರಿಸಿ ಹಣ, ಫೋನ್ ಮತ್ತು ನಗದು ದರೋಡೆ ಮಾಡುತ್ತಿದ್ದ ಗ್ಯಾಂಗ್ ಬಳಿಕ ಫೋನ್ ಪೇ ಮೂಲಕ ಹಣ ವರ್ಗಯಿಸಿಕೊಳ್ಳುತ್ತಿದ್ದರು. ಈ ಕೃತ್ಯಕ್ಕೆ ಹೊರ ರಾಜ್ಯದ ಕಾರನ್ನು ಬಾಡಿಗೆ ಪಡೆದು ದರೋಡೆ ನಡೆಸಲಾಗುತ್ತಿತ್ತು ಅಲ್ಲದೆ ಆಯಿಷಾರಾಮಿ ಜೀವನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ವಿರಾಜಪೇಟೆಯ ಜಲೀಲ್ ಮತ್ತು ಮೈಸೂರಿನ ಯತೀಂದ್ರ ಎಂಬುವವರ ಮೇಲೆ ನಡೆದ ದರೋಡೆ ಪ್ರಕರಣ ಆಧರಸಿ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು