2:21 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಂಗಳೂರು: ಮನೆಕೆಲಸದಾಕೆ ಜತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗಲೇ ಹೃದಯಾಘಾತಕ್ಕೆ ವೃದ್ಧ ಸಾವು

25/11/2022, 21:11

ಬೆಂಗಳೂರು(reporterkarnataka.com):: ಮನೆಗೆಲಸದಾಕೆ ಜತೆ ಲೈಂಗಿಕ ಕ್ರಿಯೆ ನಡೆಸುತ್ತಿರುವಾಗಲೇ ವೃದ್ದರೊಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯ ಪುಟ್ಟೇನಹಳ್ಳಿಯಲ್ಲಿ ನಡೆದಿದೆ.
ಮೃತಪಟ್ಟ ವೃದ್ಧರನ್ನು ಬಾಲಸುಬ್ರಮಣಿಯನ್ (67) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪುಟ್ಟೇನಹಳ್ಳಿಯ ರಸ್ತೆಯಲ್ಲಿ ಪತ್ತೆಯಾಗಿದ್ದ ವೃದ್ಧರ ಶವ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ.

ಬಾಲಸುಬ್ರಮಣಿಯನ್ ಅವರು ಮನೆ ಕೆಲಸದಾಕೆ ಜೊತೆ ಆಕೆಯ ಮನೆಯಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಹೃದಯಾಘಾತಕ್ಕೀಡಾಗಿ ಮೃತಪಟ್ಟರು ಎಂಬ ಸತ್ಯ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.
ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್‍ಗೆ ಕರೆದುಕೊಂಡು ಹೋಗಿದ್ದ ಬಾಲಸುಬ್ರಮಣಿಯನ್ ಸಂಜೆ ವೇಳೆಗೆ ಸೊಸೆಗೆ ಕರೆ ಮಾಡಿ ಹೊರಗಡೆ ಕೆಲಸ ಇದೆ ಎಂದು ತಿಳಿಸಿದ್ದಾರೆ. ಬಳಿಕ ಕರೆ ಮಾಡಿದರೆ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಆ ನಂತರ ಮಗ ಠಾಣೆಗೆ ನಾಪತ್ತೆ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರಿಗೆ ಶಾಕ್ ಕಾದಿತ್ತು. ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚೀಲ ಮತ್ತು ಬೆಡ್‍ಶೀಟ್‍ನಲ್ಲಿ ಸುತ್ತಿದ್ದ ಮೃತದೇಹವೊಂದು ಜೆ.ಪಿ. ನಗರದ 6ನೇ ಹಂತದ ಸಮೀಪ ಪತ್ತೆಯಾಗಿತ್ತು. ಇದು ಬಾಲಸುಬ್ರಮಣಿಯನ್ ಎಂದು ಗುರುತಿಸಲಾಗಿತ್ತು. ಬಳಿಕ ವೃದ್ಧನ ಸಾವಿನ ಬಗ್ಗೆ ಅನುಮಾನ ಮೂಡಿತ್ತು. ಆದರೆ, ದೇಹದ ಮೇಲೆ ಯಾವುದೇ ಗಾಯಗಳು ಕಂಡು ಬಂದಿಲ್ಲ. ಹೇಗೆ ಮೃತಪಟ್ಟರು ಎಂದು ತಲೆಕೆಡಿಸಿಕೊಂಡರು ಪೊಲೀಸರು.
ಈ ವೇಳೆ ಸಿಡಿಆರ್ ಪರಿಶೀಲಿಸಿದಾಗ ಶಾಕಿಂಗ್ ವಿಚಾರ ಬೆಳಕಿಗೆ ಬಂದಿತ್ತು.

ಬಾಲಸುಬ್ರಮಣಿಯನ್ ಕಾಲ್ ಹಿಸ್ಟರಿ ಜಾಲಾಡಿದಾಗ ನಿರಂತರವಾಗಿ ಮಹಿಳೆಯೊಬ್ಬರ ಜತೆಗೆ ಸಂಪರ್ಕದಲ್ಲಿ ಇದ್ದದ್ದು ತಿಳಿಯಿತು. ಇನ್ನು ಸಾರಕ್ಕಿ ಸಿಗ್ನಲ್ ಬಳಿ ವೃದ್ಧರ ಲಾಸ್ಟ್ ಲೊಕೇಶನ್ ದಾಖಲಾಗಿತ್ತು. ಹೀಗಾಗಿ ಆ ಮಹಿಳೆ ಯಾರು ಅನ್ನೋದರ ಕುರಿತು ಖಾಕಿ ಬೆನ್ನು ಹತ್ತಿತ್ತು. ತನಿಖೆ ವೇಳೆ ಬಾಲಸುಬ್ರಮಣಿಯನ್ ಮನೆಗೆ ಬರುತ್ತಿದ್ದ ಮನೆ ಕೆಲಸದಾಕೆ ಮೇಲೆ ಅನುಮಾನ ಮೂಡಿತ್ತು. ನಂತರ ಆಕೆಯನ್ನು ವಿಚಾರಣೆಗೆ ಒಳಪಡಿಸಿದಾಗ ಸಾವಿನ ಸತ್ಯ ಬಯಲಾಯಿತು.

ಇನ್ನು ವೃದ್ಧ ಹೃದಯಾಘಾತದಿಂದ ಸಾವನ್ನಪ್ಪಿದ್ದರಿಂದ ಗಾಬರಿಗೊಂಡ ಮನೆಕೆಲಸದಾಕೆ ತನ್ನ ಗಂಡನಿಗೆ ಈ ಬಗ್ಗೆ ಮಾಹಿತಿ ನೀಡಿದ್ದಳು. ನಂತರ ಮನೆಗೆ ಬಂದ ಗಂಡ ಮತ್ತು ಸಹೋದರ ಸೇರಿ ಸುಬ್ರಮಣಿಯನ್ ಮೃತದೇಹವನ್ನು ಪ್ಲಾಸ್ಟಿಕ್‌ ಬ್ಯಾಗ್‍ನಲ್ಲಿ ಕಟ್ಟಿ ತೆಗೆದುಕೊಂಡು ಹೋಗಿ ರಸ್ತೆ ಮಧ್ಯೆ ಹಾಕಿ ಬಂದಿದ್ದರು.

ಪೊಲೀಸ್ ವಿಚಾರಣೆ ವೇಳೆ ಮನೆ ಕೆಲಸದಾಕೆ ನಡೆದ ವಿಚಾರವನ್ನು ಹೇಳಿದ್ದು, ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಸಾವು ಆಯ್ತು. ನಮ್ಮ ಮನೆಯಲ್ಲೇ ಮೃತಪಟ್ಟರು. ಕೊಲೆ ಪ್ರಕರಣದಲ್ಲಿ ಪೊಲೀಸರು ಎಲ್ಲಿ ಬಂಧಿಸುತ್ತಾರೆ ಎಂದು ಹೆದರಿ ಹೀಗೆ ಮಾಡಿದ್ದೇವೆ ಎಂದು ಹೇಳಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು