6:37 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಬೆಂಗಳೂರು ನಗರದಲ್ಲಿ ಸರಕಾರವನ್ನು ಅಣಕಿಸುವ ಪೇಸಿಎಂ ಮಾದರಿಯ ಪೋಸ್ಟರ್‌: ಕೇಸ್ ದಾಖಲು 

21/09/2022, 17:02

ಬೆಂಗಳೂರು(reporterkarnataka.com): ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ  ಮಾದರಿಯ ಪೋಸ್ಟರ್‌ ನ್ನು ನಗರದ ಹಲವೆಡೆ ಅಂಟಿಸಿರುವ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ನಗರದ ಜಯಮಹಲ್‌ ರಸ್ತೆ, ಇಂಡಿಯನ್ ಎಕ್ಸ್ ಪ್ರೆಸ್‌ ಬಳಿ ಗೋಡೆಗೆ ಪೇ ಸಿಎಂ ಎಂದು ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ಪೋಸ್ಟರ್‌ ಅಂಟಿಸುವ ಮೂಲಕ ಭ್ರಷ್ಟ ಸರ್ಕಾರ ಎಂದು ಅಣಕಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ  ಮಾದರಿಯ ಪೋಸ್ಟರ್‌ ನ್ನು ಅಂಟಿಸಿರುವ ಸಂಬಂಧ ಮುಖ್ಯಮಂತ್ರಿಗಳು ವರದಿ ಕೇಳಿಲ್ಲ. ಕೇಂದ್ರ ವಿಭಾಗದ ಪೊಲೀಸರು ಈ ಸಂಬಂಧ ಬರುವ ದೂರುಗಳನ್ನು ಪಡೆದು ತನಿಖೆಯನ್ನು ‌ನಡೆಸಲಿದ್ದಾರೆ ಎಂದರು.

ಪೇಟಿಎಂ  ಮಾದರಿಯ ಪೋಸ್ಟರ್‌ ನ್ನು ಅಂಟಿಸಿರುವ ಸಂಬಂಧ ವರದಿ ಕೇಳಿದರೆ ಮಾಹಿತಿ‌ ಸಂಗ್ರಹಿಸಿ ತನಿಖೆಯನ್ನು ‌ನಡೆಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು