6:47 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಬೆಂಗಳೂರು ನಗರದಲ್ಲಿ ಸರಕಾರವನ್ನು ಅಣಕಿಸುವ ಪೇಸಿಎಂ ಮಾದರಿಯ ಪೋಸ್ಟರ್‌: ಕೇಸ್ ದಾಖಲು 

21/09/2022, 17:02

ಬೆಂಗಳೂರು(reporterkarnataka.com): ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ  ಮಾದರಿಯ ಪೋಸ್ಟರ್‌ ನ್ನು ನಗರದ ಹಲವೆಡೆ ಅಂಟಿಸಿರುವ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ನಗರದ ಜಯಮಹಲ್‌ ರಸ್ತೆ, ಇಂಡಿಯನ್ ಎಕ್ಸ್ ಪ್ರೆಸ್‌ ಬಳಿ ಗೋಡೆಗೆ ಪೇ ಸಿಎಂ ಎಂದು ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ಪೋಸ್ಟರ್‌ ಅಂಟಿಸುವ ಮೂಲಕ ಭ್ರಷ್ಟ ಸರ್ಕಾರ ಎಂದು ಅಣಕಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ  ಮಾದರಿಯ ಪೋಸ್ಟರ್‌ ನ್ನು ಅಂಟಿಸಿರುವ ಸಂಬಂಧ ಮುಖ್ಯಮಂತ್ರಿಗಳು ವರದಿ ಕೇಳಿಲ್ಲ. ಕೇಂದ್ರ ವಿಭಾಗದ ಪೊಲೀಸರು ಈ ಸಂಬಂಧ ಬರುವ ದೂರುಗಳನ್ನು ಪಡೆದು ತನಿಖೆಯನ್ನು ‌ನಡೆಸಲಿದ್ದಾರೆ ಎಂದರು.

ಪೇಟಿಎಂ  ಮಾದರಿಯ ಪೋಸ್ಟರ್‌ ನ್ನು ಅಂಟಿಸಿರುವ ಸಂಬಂಧ ವರದಿ ಕೇಳಿದರೆ ಮಾಹಿತಿ‌ ಸಂಗ್ರಹಿಸಿ ತನಿಖೆಯನ್ನು ‌ನಡೆಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು