6:57 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬೆಂಗಳೂರು ನಗರದಲ್ಲಿ ಸರಕಾರವನ್ನು ಅಣಕಿಸುವ ಪೇಸಿಎಂ ಮಾದರಿಯ ಪೋಸ್ಟರ್‌: ಕೇಸ್ ದಾಖಲು 

21/09/2022, 17:02

ಬೆಂಗಳೂರು(reporterkarnataka.com): ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ  ಮಾದರಿಯ ಪೋಸ್ಟರ್‌ ನ್ನು ನಗರದ ಹಲವೆಡೆ ಅಂಟಿಸಿರುವ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ನಗರದ ಜಯಮಹಲ್‌ ರಸ್ತೆ, ಇಂಡಿಯನ್ ಎಕ್ಸ್ ಪ್ರೆಸ್‌ ಬಳಿ ಗೋಡೆಗೆ ಪೇ ಸಿಎಂ ಎಂದು ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ಪೋಸ್ಟರ್‌ ಅಂಟಿಸುವ ಮೂಲಕ ಭ್ರಷ್ಟ ಸರ್ಕಾರ ಎಂದು ಅಣಕಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ  ಮಾದರಿಯ ಪೋಸ್ಟರ್‌ ನ್ನು ಅಂಟಿಸಿರುವ ಸಂಬಂಧ ಮುಖ್ಯಮಂತ್ರಿಗಳು ವರದಿ ಕೇಳಿಲ್ಲ. ಕೇಂದ್ರ ವಿಭಾಗದ ಪೊಲೀಸರು ಈ ಸಂಬಂಧ ಬರುವ ದೂರುಗಳನ್ನು ಪಡೆದು ತನಿಖೆಯನ್ನು ‌ನಡೆಸಲಿದ್ದಾರೆ ಎಂದರು.

ಪೇಟಿಎಂ  ಮಾದರಿಯ ಪೋಸ್ಟರ್‌ ನ್ನು ಅಂಟಿಸಿರುವ ಸಂಬಂಧ ವರದಿ ಕೇಳಿದರೆ ಮಾಹಿತಿ‌ ಸಂಗ್ರಹಿಸಿ ತನಿಖೆಯನ್ನು ‌ನಡೆಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು