3:18 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ  ರಾಯಿಟರ್ಸ್ ಸಂಸ್ಥೆಯ ಪತ್ರಕರ್ತೆಯ ಮೃತದೇಹ ಪತ್ತೆ; ಕೊಲೆ ಶಂಕೆ

24/03/2022, 12:52

ಬೆಂಗಳೂರು(reporterkarnataka.com):  ರಾಯಿಟರ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆಯೊಬ್ಬರ ಮೃತದೇಹ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿ ಕೊಲೆ ಮಾಡಿರುವುದಾಗಿ ಆಕೆಯ ಕುಟುಂಬದವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮೃತಪಟ್ಟವರನ್ನು ಪತ್ರಕರ್ತೆ ಶ್ರುತಿ (35) ಎಂದು ಗುರುತಿಸಲಾಗಿದೆ.

ಶ್ರುತಿ ಹಾಗೂ ಅನೀಶ್ ವಿವಾಹ 2017ರಲ್ಲಿ ಆಗಿತ್ತು.ಬೆಂಗಳೂರಿಗೆ ಮರಳಿದ್ದ ದಂಪತಿ ವೈಟ್ ಫೀಲ್ಡ್ ನ ನಲ್ಲೂರುಹಳ್ಳಿ ರಸ್ತೆ ಬಳಿಯ ಎಸ್.ವಿ.ಮೈಪೇರ್ ವಸತಿ ಸಮುಚ್ಚಯದ ಫ್ಲ್ಯಾಟ್ನಲ್ಲಿ ವಾಸವಾಗಿದ್ದರು. ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಅನೀಶ್, ಪ್ರತಿನಿತ್ಯ ಶ್ರುತಿಗೆ ಚಿತ್ರಹಿಂಸೆ ನೀಡುತ್ತಿದ್ದ. ಸಂಬಳದ ಹಣವನ್ನೆಲ್ಲಾ ತವರು ಮನೆಗೆ ನೀಡುತ್ತೀಯಾ ಎಂದು ಹೇಳಿ ಹಲ್ಲೆ ನಡೆಸುತ್ತಿದ್ದ. ಒಮ್ಮೊಮ್ಮೆ ಮದ್ಯಪಾನ ಮಾಡಿ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ಶ್ರುತಿ ಸಹೋದರ ನಿಶಾಂತ್ ನಾರಾಯಣನ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು