7:46 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬೆಂಗಳೂರು ಸಹಿತ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ‘ಅಗ್ನಿವೀರ’ ಅವಕಾಶ: ಆ.10ರಿಂದ ಹಾಸನದಲ್ಲಿ ಭೂ ಸೇನಾ Rally

02/07/2022, 15:28

ಹಾಸನ(reporterkarnataka.com): ಆಗಸ್ಟ್ 10 ರಿಂದ ಆಗಸ್ಟ್ 22 ರವರೆಗೆ ಹಾಸನ ಜಿಲ್ಲಾ ಕ್ರೀಡಾ ಮೈದಾನದಲ್ಲಿ  ಅಗ್ನಿವೀರ ನೇಮಕಾತಿ ನಡೆಯಲಿದೆ.  ‘ಅಗ್ನಿಪಥ’ ಯೋಜನೆಯಡಿ ಭೂ ಸೇನಾ Rally ನಡೆಯಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಈ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಲಾಗಿದೆ.

ಜನರಲ್ ಡ್ಯೂಟಿ, ಅಗ್ನಿವೀರ ತಾಂತ್ರಿಕ ನೇಮಕಾತಿ ಜೊತೆಗೆ 8ನೇ ತರಗತಿ ಮತ್ತು 10ನೇ ತರಗತಿ ಉತ್ತೀರ್ಣವಾಗಿರುವವರಿಗೆ ಅಗ್ನಿವೀರ ಕುಶಲಕರ್ಮಿ, ಅಗ್ನಿವೀರ ಕ್ಲರ್ಕ್ ಮತ್ತು ಸ್ಟೋರ್ ಕೀಪರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಆನ್ಲೈನ್ ಮೂಲಕ ನೋಂದಣಿ ಕಡ್ಡಾಯವಾಗಿದ್ದು, ಜುಲೈ 1ರಿಂದ ಜುಲೈ 30ರವರೆಗೆ https//joinindianarmy.nic.in ವೆಬ್ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಡ್ಮಿಟ್ ಕಾರ್ಡ್ ಗಳನ್ನು ನೋಂದಣಿ ವೇಳೆ ನೀಡಲಾದ ಇಮೇಲ್ ವಿಳಾಸಕ್ಕೆ ಆಗಸ್ಟ್ 1ರಿಂದ ಆಗಸ್ಟ್ 7ರ ಮಧ್ಯೆ ಕಳುಹಿಸಿಕೊಡಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು