7:39 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬೆಂಗಳೂರು ಸಮೀಪದ ಕುಣಿಗಲ್ ಬಳಿ ಫ್ಲೈ ಓವರ್ ನಿಂದ ಕೆಳಗೆ ಹಾರಿದ ಬೈಕ್: ಸವಾರ ಮಸ್ಕಿ ನಿವಾಸಿ ದಾರುಣ ಸಾವು

06/11/2023, 00:07

ಬೆಂಗಳೂರು/ರಾಯಚೂರು(reporterkarnataka.com): ಇಲ್ಲಿಗೆ ಸಮೀಪದ ಕುಣಿಗಲ್ ಫ್ಲೈ ಓವರ್ ನಿಂದ ಬೈಕೊಂದು ಕೆಳಗುರುಳಿದ ಪರಿಣಾಮ ರಾಯಚೂರು ಜಿಲ್ಲೆಯ ಮಸ್ಕಿಯ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಮಸ್ಕಿ ಪಟ್ಟಣದ ಅಂತರಗಂಗೆ ಗ್ರಾಮದ ವೀರೇಂದ್ರ ಪಾಟೀಲ್(26) ಎಂದು ಗುರುತಿಸಲಾಗಿದೆ. ಈತ
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ವೀರೇಂದ್ರ ಪಾಟೀಲ್ ಅವರ ಬೈಕ್ ಕುಣಿಗಲ್ ಬೈಪಾಸ್ ಸಮೀಪ ನಿಯಂತ್ರಣ ತಪ್ಪಿ ಏಕಾಏಕಿ ಪ್ಲೇ ಓವರ್ ತಡಗೋಡಗೆ ಡಿಕ್ಕಿ ಹೊಡೆದ ಬಳಿಕ 5-6 ಬಾರಿ ಪಲ್ಟಿಯಾಗಿ 40 ಅಡಿ ಕೆಳಗೆ ಬಿದ್ದಿದೆ.ಗಂಭೀರ ಗಾಯಗೊಂಡ ವೀರೇಂದ್ರ ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ನೆಲಮಂಗಲ ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಇಂದು ಬೆಂಗಳೂರಿನಿಂದ ಅಂತರಗಂಗೆ ಗ್ರಾಮಕ್ಕೆ ತರಲಾಗಿದ್ದು ಕುಟುಂಬಸ್ಥರ ಕೂಗು ಮುಗಿಲುಮಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು