1:47 PM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಬೆಂಗಳೂರು ಸಮೀಪದ ಕುಣಿಗಲ್ ಬಳಿ ಫ್ಲೈ ಓವರ್ ನಿಂದ ಕೆಳಗೆ ಹಾರಿದ ಬೈಕ್: ಸವಾರ ಮಸ್ಕಿ ನಿವಾಸಿ ದಾರುಣ ಸಾವು

06/11/2023, 00:07

ಬೆಂಗಳೂರು/ರಾಯಚೂರು(reporterkarnataka.com): ಇಲ್ಲಿಗೆ ಸಮೀಪದ ಕುಣಿಗಲ್ ಫ್ಲೈ ಓವರ್ ನಿಂದ ಬೈಕೊಂದು ಕೆಳಗುರುಳಿದ ಪರಿಣಾಮ ರಾಯಚೂರು ಜಿಲ್ಲೆಯ ಮಸ್ಕಿಯ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಮಸ್ಕಿ ಪಟ್ಟಣದ ಅಂತರಗಂಗೆ ಗ್ರಾಮದ ವೀರೇಂದ್ರ ಪಾಟೀಲ್(26) ಎಂದು ಗುರುತಿಸಲಾಗಿದೆ. ಈತ
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ವೀರೇಂದ್ರ ಪಾಟೀಲ್ ಅವರ ಬೈಕ್ ಕುಣಿಗಲ್ ಬೈಪಾಸ್ ಸಮೀಪ ನಿಯಂತ್ರಣ ತಪ್ಪಿ ಏಕಾಏಕಿ ಪ್ಲೇ ಓವರ್ ತಡಗೋಡಗೆ ಡಿಕ್ಕಿ ಹೊಡೆದ ಬಳಿಕ 5-6 ಬಾರಿ ಪಲ್ಟಿಯಾಗಿ 40 ಅಡಿ ಕೆಳಗೆ ಬಿದ್ದಿದೆ.ಗಂಭೀರ ಗಾಯಗೊಂಡ ವೀರೇಂದ್ರ ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ನೆಲಮಂಗಲ ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಇಂದು ಬೆಂಗಳೂರಿನಿಂದ ಅಂತರಗಂಗೆ ಗ್ರಾಮಕ್ಕೆ ತರಲಾಗಿದ್ದು ಕುಟುಂಬಸ್ಥರ ಕೂಗು ಮುಗಿಲುಮಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು