5:03 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಬೆಂಗಳೂರು ಸಮೀಪದ ಕುಣಿಗಲ್ ಬಳಿ ಫ್ಲೈ ಓವರ್ ನಿಂದ ಕೆಳಗೆ ಹಾರಿದ ಬೈಕ್: ಸವಾರ ಮಸ್ಕಿ ನಿವಾಸಿ ದಾರುಣ ಸಾವು

06/11/2023, 00:07

ಬೆಂಗಳೂರು/ರಾಯಚೂರು(reporterkarnataka.com): ಇಲ್ಲಿಗೆ ಸಮೀಪದ ಕುಣಿಗಲ್ ಫ್ಲೈ ಓವರ್ ನಿಂದ ಬೈಕೊಂದು ಕೆಳಗುರುಳಿದ ಪರಿಣಾಮ ರಾಯಚೂರು ಜಿಲ್ಲೆಯ ಮಸ್ಕಿಯ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಮಸ್ಕಿ ಪಟ್ಟಣದ ಅಂತರಗಂಗೆ ಗ್ರಾಮದ ವೀರೇಂದ್ರ ಪಾಟೀಲ್(26) ಎಂದು ಗುರುತಿಸಲಾಗಿದೆ. ಈತ
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ವೀರೇಂದ್ರ ಪಾಟೀಲ್ ಅವರ ಬೈಕ್ ಕುಣಿಗಲ್ ಬೈಪಾಸ್ ಸಮೀಪ ನಿಯಂತ್ರಣ ತಪ್ಪಿ ಏಕಾಏಕಿ ಪ್ಲೇ ಓವರ್ ತಡಗೋಡಗೆ ಡಿಕ್ಕಿ ಹೊಡೆದ ಬಳಿಕ 5-6 ಬಾರಿ ಪಲ್ಟಿಯಾಗಿ 40 ಅಡಿ ಕೆಳಗೆ ಬಿದ್ದಿದೆ.ಗಂಭೀರ ಗಾಯಗೊಂಡ ವೀರೇಂದ್ರ ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ನೆಲಮಂಗಲ ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಇಂದು ಬೆಂಗಳೂರಿನಿಂದ ಅಂತರಗಂಗೆ ಗ್ರಾಮಕ್ಕೆ ತರಲಾಗಿದ್ದು ಕುಟುಂಬಸ್ಥರ ಕೂಗು ಮುಗಿಲುಮಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು