3:26 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬೆಂಗಳೂರು: ಸೆಮಿಕಾನ್ ಇಂಡಿಯಾ 2022 ಸಮ್ಮೇಳನ; ಏ. 29ರಂದು ಪ್ರಧಾನಿ ಮೋದಿ ಉದ್ಘಾಟನೆ

22/04/2022, 14:49

ಬೆಂಗಳೂರು(reporterkarnataka.com): ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಆಶ್ರಯದಲ್ಲಿ ‘ಸೆಮಿಕಾನ್ ಇಂಡಿಯಾ 2022’ ಮೂರು ದಿನಗಳ ಸಮ್ಮೇಳನ ಬೆಂಗಳೂರಿನ ಐಟಿಸಿ ಗಾರ್ಡೇನಿಯಾದಲ್ಲಿ  ಏ. 29ರಿಂದ ಮೇ 1ರವರೆಗೆ ಆಯೋಜಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಂದು  ಬೆಳಗ್ಗೆ 11 ಗಂಟೆಗೆ ಸಮ್ಮೇಳನ ಉದ್ಘಾಟಿಸಲಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನದಲ್ಲಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಉತ್ಪಾದನೆ, ಸೆಮಿಕಂಡಕ್ಟರ್ ವಿನ್ಯಾಸ, ಉತ್ಪಾದನೆ ಮತ್ತು ಆವಿಷ್ಕಾರದಲ್ಲಿ ಮುಂಚೂಣಿಯಲ್ಲಿರುವಂತೆ ಮಾಡಲು ಯೋಜಿಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಜಾಗತಿಕ ಸೆಮಿಕಂಡಕ್ಟರ್ ಮೌಲ್ಯ ಸರಪಳಿಯಲ್ಲಿ ಭಾರತವನ್ನು ಮಹತ್ವದ ಪಾತ್ರದಾರಿಯನ್ನಾಗಿ ಮಾಡುವುದು ಪ್ರಧಾನಿ ಅವರ ದೃಷ್ಟಿಕೋನವಾಗಿದೆ. ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ- ಈ ವಲಯದಲ್ಲಿ ಕ್ಷಿಪ್ರ ನಿರ್ಣಾಯಕ ಪ್ರಗತಿ ಮಾಡಲಾಗಿದೆ. ಸೆಮಿಕಾನ್ ಇಂಡಿಯಾ 2022 ಸಮ್ಮೇಳನವು ಸೆಮಿಕಂಡಕ್ಟರ್ ಉದ್ಯಮ, ಸಂಶೋಧನೆ ಮತ್ತು ಶಿಕ್ಷಣದಿಂದ ಪ್ರಪಂಚದಾದ್ಯಂತದ ಅತ್ಯುತ್ತಮ ಮನಸ್ಸುಗಳನ್ನು ಆಕರ್ಷಿಸುತ್ತದೆ ಮತ್ತು ಭಾರತವನ್ನು ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮತ್ತು ಸೆಮಿಕಂಡಕ್ಟರ್ ಉದ್ಯಮಕ್ಕೆ ಜಾಗತಿಕ ಕೇಂದ್ರವನ್ನಾಗಿ ಮಾಡುವ ಪ್ರಧಾನಮಂತ್ರಿ ಅವರ ದೃಷ್ಟಿಕೋನವನ್ನು ಪೂರೈಸುವಲ್ಲಿ ದೊಡ್ಡ ಹೆಜ್ಜೆಯಾಗಿ ಕಾರ್ಯನಿರ್ವಹಿಸುತ್ತದೆ.

ಈ ಸಮ್ಮೇಳನದಲ್ಲಿ ಮೈಕ್ರಾನ್ ಸಿಇಒ ಸಂಜಯ್ ಮೆಹ್ರೋತ್ರಾ, ಕ್ಯಾಡೆನ್ಸ್ ಸಿಇಒ ಅನಿರುದ್ಧ ದೇವಗನ್, ಇಂಡೋ-ಅಮೆರಿಕ ವೆಂಚರ್ ಪಾಲುದಾರ ಸಂಸ್ಥಾಪಕ ವಿನೋದ್ ಧಾಮ್, ಸೆಮಿ ಅಧ್ಯಕ್ಷ ಅಜಿತ್‌ ಮನೋಚಾ, ಎಮೆರಿಟಸ್ ಸ್ಟಾನ್‌ಫೋರ್ಡ್ ಪ್ರೊ. ಆರೋಗ್ಯಸ್ವಾಮಿ ಪಾಲ್‌ರಾಜ್ ಮತ್ತಿತರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸೆಮಿಕಂಡಕ್ಟರ್ ವಲಯದಲ್ಲಿ ಪಾಲುದಾರಿಕೆ ಮತ್ತು ಮೈತ್ರಿಗಳನ್ನು ರೂಪಿಸುವ ಮೂರು ದಿನಗಳ ಸಮ್ಮೇಳನದಲ್ಲಿ ಸಹಿ ಮಾಡಲಿರುವ ಒಡಂಬಡಿಕೆಗಳ ಸಂಖ್ಯೆಯನ್ನು ಸಚಿವಾಲಯವು ಎದುರು ನೋಡುತ್ತಿದೆ ಎಂದು ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು