6:01 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಬೆಂಗಳೂರು: ಸೆಮಿಕಾನ್ ಇಂಡಿಯಾ 2022 ಸಮ್ಮೇಳನ; ಏ. 29ರಂದು ಪ್ರಧಾನಿ ಮೋದಿ ಉದ್ಘಾಟನೆ

22/04/2022, 14:49

ಬೆಂಗಳೂರು(reporterkarnataka.com): ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಆಶ್ರಯದಲ್ಲಿ ‘ಸೆಮಿಕಾನ್ ಇಂಡಿಯಾ 2022’ ಮೂರು ದಿನಗಳ ಸಮ್ಮೇಳನ ಬೆಂಗಳೂರಿನ ಐಟಿಸಿ ಗಾರ್ಡೇನಿಯಾದಲ್ಲಿ  ಏ. 29ರಿಂದ ಮೇ 1ರವರೆಗೆ ಆಯೋಜಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಂದು  ಬೆಳಗ್ಗೆ 11 ಗಂಟೆಗೆ ಸಮ್ಮೇಳನ ಉದ್ಘಾಟಿಸಲಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನದಲ್ಲಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಉತ್ಪಾದನೆ, ಸೆಮಿಕಂಡಕ್ಟರ್ ವಿನ್ಯಾಸ, ಉತ್ಪಾದನೆ ಮತ್ತು ಆವಿಷ್ಕಾರದಲ್ಲಿ ಮುಂಚೂಣಿಯಲ್ಲಿರುವಂತೆ ಮಾಡಲು ಯೋಜಿಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಜಾಗತಿಕ ಸೆಮಿಕಂಡಕ್ಟರ್ ಮೌಲ್ಯ ಸರಪಳಿಯಲ್ಲಿ ಭಾರತವನ್ನು ಮಹತ್ವದ ಪಾತ್ರದಾರಿಯನ್ನಾಗಿ ಮಾಡುವುದು ಪ್ರಧಾನಿ ಅವರ ದೃಷ್ಟಿಕೋನವಾಗಿದೆ. ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ- ಈ ವಲಯದಲ್ಲಿ ಕ್ಷಿಪ್ರ ನಿರ್ಣಾಯಕ ಪ್ರಗತಿ ಮಾಡಲಾಗಿದೆ. ಸೆಮಿಕಾನ್ ಇಂಡಿಯಾ 2022 ಸಮ್ಮೇಳನವು ಸೆಮಿಕಂಡಕ್ಟರ್ ಉದ್ಯಮ, ಸಂಶೋಧನೆ ಮತ್ತು ಶಿಕ್ಷಣದಿಂದ ಪ್ರಪಂಚದಾದ್ಯಂತದ ಅತ್ಯುತ್ತಮ ಮನಸ್ಸುಗಳನ್ನು ಆಕರ್ಷಿಸುತ್ತದೆ ಮತ್ತು ಭಾರತವನ್ನು ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮತ್ತು ಸೆಮಿಕಂಡಕ್ಟರ್ ಉದ್ಯಮಕ್ಕೆ ಜಾಗತಿಕ ಕೇಂದ್ರವನ್ನಾಗಿ ಮಾಡುವ ಪ್ರಧಾನಮಂತ್ರಿ ಅವರ ದೃಷ್ಟಿಕೋನವನ್ನು ಪೂರೈಸುವಲ್ಲಿ ದೊಡ್ಡ ಹೆಜ್ಜೆಯಾಗಿ ಕಾರ್ಯನಿರ್ವಹಿಸುತ್ತದೆ.

ಈ ಸಮ್ಮೇಳನದಲ್ಲಿ ಮೈಕ್ರಾನ್ ಸಿಇಒ ಸಂಜಯ್ ಮೆಹ್ರೋತ್ರಾ, ಕ್ಯಾಡೆನ್ಸ್ ಸಿಇಒ ಅನಿರುದ್ಧ ದೇವಗನ್, ಇಂಡೋ-ಅಮೆರಿಕ ವೆಂಚರ್ ಪಾಲುದಾರ ಸಂಸ್ಥಾಪಕ ವಿನೋದ್ ಧಾಮ್, ಸೆಮಿ ಅಧ್ಯಕ್ಷ ಅಜಿತ್‌ ಮನೋಚಾ, ಎಮೆರಿಟಸ್ ಸ್ಟಾನ್‌ಫೋರ್ಡ್ ಪ್ರೊ. ಆರೋಗ್ಯಸ್ವಾಮಿ ಪಾಲ್‌ರಾಜ್ ಮತ್ತಿತರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸೆಮಿಕಂಡಕ್ಟರ್ ವಲಯದಲ್ಲಿ ಪಾಲುದಾರಿಕೆ ಮತ್ತು ಮೈತ್ರಿಗಳನ್ನು ರೂಪಿಸುವ ಮೂರು ದಿನಗಳ ಸಮ್ಮೇಳನದಲ್ಲಿ ಸಹಿ ಮಾಡಲಿರುವ ಒಡಂಬಡಿಕೆಗಳ ಸಂಖ್ಯೆಯನ್ನು ಸಚಿವಾಲಯವು ಎದುರು ನೋಡುತ್ತಿದೆ ಎಂದು ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು