4:12 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಶಂಕಿತ ಲಷ್ಕರ್‌ ಉಗ್ರ ಸೆರೆ:  ಪತ್ನಿ, ಮಕ್ಕಳ ಜತೆ ವಾಸ; ಸಿಸಿಬಿ ಪೊಲೀಸರ ಕಾರ್ಯಾಚರಣೆ

25/07/2022, 15:19

ಬೆಂಗಳೂರು(reporterkarnataka.com):.ನಗರದ ತಿಲಕ್ ನಗರ ಪ್ರದೇಶದಲ್ಲಿ ವಾಸವಿದ್ದ ಶಂಕಿತ ಲಷ್ಕರ್‌ ಭಯೋತ್ಪಾದಕನನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ನಗರದ ತಿಲಕ್ ನಗರ ಪ್ರದೇಶದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಶಂಕಿತ ಲಷ್ಕರ್ ಭಯೋತ್ಪಾದಕನನ್ನು ಅಖ್ತರ್ ಹುಸೇನ್ ಎಂದು ಗುರುತಿಸಲಾಗಿದ್ದು, ಅಸ್ಸಾಂನಲ್ಲಿ ಮೂಲದವನು ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಸಿಸಿಬಿ ಪೊಲೀಸರು ಹುಸೇನ್‌ ವಾಸವಿದ್ದ ತಿಲಕ್‌ನಗರದ ಬಿಟಿಪಿ ಪ್ರದೇಶದ ಕಟ್ಟಡದ ಮೇಲೆ ದಾಳಿ ನಡೆಸಿದ್ದಾರೆ. ಆತ ಕೆಲವು ಯುವಕರೊಂದಿಗೆ ಕಟ್ಟಡದ ಮೂರನೇ ಮಹಡಿಯಲ್ಲಿ ವಾಸವಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಹುಸೇನ್‌ನನ್ನು ಬಂಧಿಸಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ  ಈ ಕುರಿತು ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಕಳೆದ ತಿಂಗಳು, ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲಿಯೇ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ತಾಲಿಬ್‌ ಹುಸೇನ್‌ ನನ್ನು ಬಂಧಿಸಲಾಗಿತ್ತು. ಆತ ತನ್ನ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ನಗರದ ಓಕಳಿಪುರಂನಲ್ಲಿ ಕಳೆದ ಆರು ವರ್ಷಗಳಿಂದ ವಾಸವಾಗಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು