7:08 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಬೆಂಗಳೂರು: ಶ್ರೀನಿವಾಸ ಪ್ರಭುಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ

15/08/2023, 21:49

ಬೆಂಗಳೂರು(reporterlarnataka.com): ಯಕ್ಷಗಾನದಿಂದ ಕನ್ನಡ ಭಾಷೆಯು ಇನ್ನಷ್ಟು ಜೀವಂತವಾಗಿರುತ್ತದೆ, ದೈಹಿಕ ಮಾನಸಿಕ ಸ್ವಾಸ್ಥ್ಯ ಕಾಪಾಡುವುದರಲ್ಲಿ ಯಕ್ಷಗಾನ ಅತ್ಯಂತ ಪ್ರಯೋಜನಕಾರಿ ಎಂದು ಎಂದು ಶಾಸಕ ರವಿ ಸುಬ್ರಹ್ಮಣ್ಯ ಹೇಳಿದರು.
ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ಭಾನುವಾರ ಸೃಷ್ಟಿ ಕಲಾ ವಿದ್ಯಾಲಯದ 23ನೇ ಸೃಷ್ಟಿ ಸಂಭ್ರಮ ಅಂಗವಾಗಿ ಪ್ರಸಿದ್ಧ ಚೆಂಡೆವಾದಕ ಶ್ರೀನಿವಾಸ ಪ್ರಭು( ಗುಂಡ) ಅವರಿಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಸೃಷ್ಟಿ ಕಲಾವಿದ್ಯಾಲಯವು ನಿರಂತರ ಯಕ್ಷಗಾನ ತರಬೇತಿ, ಕಲಾಸೇವೆ ಮೂಲಕ ಬಸವನ ಗುಡಿ ಕ್ಷೇತ್ರದ ಗೌರವವನ್ನು ಹೆಚ್ಚಿಸಿದೆ ಎಂದರು.
ಪ್ರಶಸ್ತಿ ಸ್ವೀಕರಿಸಿದ ಶ್ರೀನಿವಾಸ ಪ್ರಭು, ಸೃಷ್ಟಿಯ ಈ ಪ್ರಶಸ್ತಿ ನನ್ನ ಕಲಾ ಬದುಕಿನಲ್ಲಿ ಅತ್ಯಂತ ಮಹತ್ವದ್ದು ಹಾಗೂ ಮರೆಯಲಾರದ್ದು ಎಂದರು.


ಸೃಷ್ಟಿ ಅಧ್ಯಕ್ಷ ಛಾಯಾಪತಿ ಕಂಚಿಬೈಲ್, ಗೌರವಾಧ್ಯಕ್ಷ ಶ್ರೀಕಾಂತ್ ಎಂ.ಜಿ., ಕಲಾವಿದರುಗಳಾದ ಸುಬ್ರಾಯ ಹೆಬ್ಬಾರ್, ಅಕ್ಷಯ ಆಚಾರ್ಯ ನಿತ್ಯಾನಂದ ನಾಯಕ್ , ಅರ್ಜುನ್ ಕೊರ್ಡೇಲ್, ಭರತ್ ರಾಜ್ ಪರ್ಕಳ ಇದ್ದರು.
ಈ ಸಂದರ್ಭ ಸುಬ್ರಾಯ ಹೆಬ್ಬಾರ್‌ ಮತ್ತು ಭರತ್‌ ರಾಜ್‌ ಪರ್ಕಳ ನಿರ್ದೇಶನದಲ್ಲಿ, ನಿತ್ಯಾನಂದ ನಾಯಕ್‌ ಪರಿಕಲ್ಪನೆಯಲ್ಲಿ ಸೃಷ್ಟಿ ಕಲಾ ವಿದ್ಯಾಲಯ ವಿದ್ಯಾರ್ಥಿಗಳಿಂದ ಕುಮಾರ ವಿಜಯ ಯಕ್ಷಗಾನ ಪ್ರದರ್ಶನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು