12:53 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಬೆಂಗಳೂರು: ಶ್ರೀನಿವಾಸ ಪ್ರಭುಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ

15/08/2023, 21:49

ಬೆಂಗಳೂರು(reporterlarnataka.com): ಯಕ್ಷಗಾನದಿಂದ ಕನ್ನಡ ಭಾಷೆಯು ಇನ್ನಷ್ಟು ಜೀವಂತವಾಗಿರುತ್ತದೆ, ದೈಹಿಕ ಮಾನಸಿಕ ಸ್ವಾಸ್ಥ್ಯ ಕಾಪಾಡುವುದರಲ್ಲಿ ಯಕ್ಷಗಾನ ಅತ್ಯಂತ ಪ್ರಯೋಜನಕಾರಿ ಎಂದು ಎಂದು ಶಾಸಕ ರವಿ ಸುಬ್ರಹ್ಮಣ್ಯ ಹೇಳಿದರು.
ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ಭಾನುವಾರ ಸೃಷ್ಟಿ ಕಲಾ ವಿದ್ಯಾಲಯದ 23ನೇ ಸೃಷ್ಟಿ ಸಂಭ್ರಮ ಅಂಗವಾಗಿ ಪ್ರಸಿದ್ಧ ಚೆಂಡೆವಾದಕ ಶ್ರೀನಿವಾಸ ಪ್ರಭು( ಗುಂಡ) ಅವರಿಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಸೃಷ್ಟಿ ಕಲಾವಿದ್ಯಾಲಯವು ನಿರಂತರ ಯಕ್ಷಗಾನ ತರಬೇತಿ, ಕಲಾಸೇವೆ ಮೂಲಕ ಬಸವನ ಗುಡಿ ಕ್ಷೇತ್ರದ ಗೌರವವನ್ನು ಹೆಚ್ಚಿಸಿದೆ ಎಂದರು.
ಪ್ರಶಸ್ತಿ ಸ್ವೀಕರಿಸಿದ ಶ್ರೀನಿವಾಸ ಪ್ರಭು, ಸೃಷ್ಟಿಯ ಈ ಪ್ರಶಸ್ತಿ ನನ್ನ ಕಲಾ ಬದುಕಿನಲ್ಲಿ ಅತ್ಯಂತ ಮಹತ್ವದ್ದು ಹಾಗೂ ಮರೆಯಲಾರದ್ದು ಎಂದರು.


ಸೃಷ್ಟಿ ಅಧ್ಯಕ್ಷ ಛಾಯಾಪತಿ ಕಂಚಿಬೈಲ್, ಗೌರವಾಧ್ಯಕ್ಷ ಶ್ರೀಕಾಂತ್ ಎಂ.ಜಿ., ಕಲಾವಿದರುಗಳಾದ ಸುಬ್ರಾಯ ಹೆಬ್ಬಾರ್, ಅಕ್ಷಯ ಆಚಾರ್ಯ ನಿತ್ಯಾನಂದ ನಾಯಕ್ , ಅರ್ಜುನ್ ಕೊರ್ಡೇಲ್, ಭರತ್ ರಾಜ್ ಪರ್ಕಳ ಇದ್ದರು.
ಈ ಸಂದರ್ಭ ಸುಬ್ರಾಯ ಹೆಬ್ಬಾರ್‌ ಮತ್ತು ಭರತ್‌ ರಾಜ್‌ ಪರ್ಕಳ ನಿರ್ದೇಶನದಲ್ಲಿ, ನಿತ್ಯಾನಂದ ನಾಯಕ್‌ ಪರಿಕಲ್ಪನೆಯಲ್ಲಿ ಸೃಷ್ಟಿ ಕಲಾ ವಿದ್ಯಾಲಯ ವಿದ್ಯಾರ್ಥಿಗಳಿಂದ ಕುಮಾರ ವಿಜಯ ಯಕ್ಷಗಾನ ಪ್ರದರ್ಶನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು