9:30 PM Monday14 - July 2025
ಬ್ರೇಕಿಂಗ್ ನ್ಯೂಸ್
ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು

ಇತ್ತೀಚಿನ ಸುದ್ದಿ

ಬೆಂಗಳೂರು: ಶ್ರೀನಿವಾಸ ಪ್ರಭುಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ

15/08/2023, 21:49

ಬೆಂಗಳೂರು(reporterlarnataka.com): ಯಕ್ಷಗಾನದಿಂದ ಕನ್ನಡ ಭಾಷೆಯು ಇನ್ನಷ್ಟು ಜೀವಂತವಾಗಿರುತ್ತದೆ, ದೈಹಿಕ ಮಾನಸಿಕ ಸ್ವಾಸ್ಥ್ಯ ಕಾಪಾಡುವುದರಲ್ಲಿ ಯಕ್ಷಗಾನ ಅತ್ಯಂತ ಪ್ರಯೋಜನಕಾರಿ ಎಂದು ಎಂದು ಶಾಸಕ ರವಿ ಸುಬ್ರಹ್ಮಣ್ಯ ಹೇಳಿದರು.
ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ಭಾನುವಾರ ಸೃಷ್ಟಿ ಕಲಾ ವಿದ್ಯಾಲಯದ 23ನೇ ಸೃಷ್ಟಿ ಸಂಭ್ರಮ ಅಂಗವಾಗಿ ಪ್ರಸಿದ್ಧ ಚೆಂಡೆವಾದಕ ಶ್ರೀನಿವಾಸ ಪ್ರಭು( ಗುಂಡ) ಅವರಿಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಸೃಷ್ಟಿ ಕಲಾವಿದ್ಯಾಲಯವು ನಿರಂತರ ಯಕ್ಷಗಾನ ತರಬೇತಿ, ಕಲಾಸೇವೆ ಮೂಲಕ ಬಸವನ ಗುಡಿ ಕ್ಷೇತ್ರದ ಗೌರವವನ್ನು ಹೆಚ್ಚಿಸಿದೆ ಎಂದರು.
ಪ್ರಶಸ್ತಿ ಸ್ವೀಕರಿಸಿದ ಶ್ರೀನಿವಾಸ ಪ್ರಭು, ಸೃಷ್ಟಿಯ ಈ ಪ್ರಶಸ್ತಿ ನನ್ನ ಕಲಾ ಬದುಕಿನಲ್ಲಿ ಅತ್ಯಂತ ಮಹತ್ವದ್ದು ಹಾಗೂ ಮರೆಯಲಾರದ್ದು ಎಂದರು.


ಸೃಷ್ಟಿ ಅಧ್ಯಕ್ಷ ಛಾಯಾಪತಿ ಕಂಚಿಬೈಲ್, ಗೌರವಾಧ್ಯಕ್ಷ ಶ್ರೀಕಾಂತ್ ಎಂ.ಜಿ., ಕಲಾವಿದರುಗಳಾದ ಸುಬ್ರಾಯ ಹೆಬ್ಬಾರ್, ಅಕ್ಷಯ ಆಚಾರ್ಯ ನಿತ್ಯಾನಂದ ನಾಯಕ್ , ಅರ್ಜುನ್ ಕೊರ್ಡೇಲ್, ಭರತ್ ರಾಜ್ ಪರ್ಕಳ ಇದ್ದರು.
ಈ ಸಂದರ್ಭ ಸುಬ್ರಾಯ ಹೆಬ್ಬಾರ್‌ ಮತ್ತು ಭರತ್‌ ರಾಜ್‌ ಪರ್ಕಳ ನಿರ್ದೇಶನದಲ್ಲಿ, ನಿತ್ಯಾನಂದ ನಾಯಕ್‌ ಪರಿಕಲ್ಪನೆಯಲ್ಲಿ ಸೃಷ್ಟಿ ಕಲಾ ವಿದ್ಯಾಲಯ ವಿದ್ಯಾರ್ಥಿಗಳಿಂದ ಕುಮಾರ ವಿಜಯ ಯಕ್ಷಗಾನ ಪ್ರದರ್ಶನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು