1:20 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬೆಂಗಳೂರು: ಶ್ರೀನಿವಾಸ ಪ್ರಭುಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ

15/08/2023, 21:49

ಬೆಂಗಳೂರು(reporterlarnataka.com): ಯಕ್ಷಗಾನದಿಂದ ಕನ್ನಡ ಭಾಷೆಯು ಇನ್ನಷ್ಟು ಜೀವಂತವಾಗಿರುತ್ತದೆ, ದೈಹಿಕ ಮಾನಸಿಕ ಸ್ವಾಸ್ಥ್ಯ ಕಾಪಾಡುವುದರಲ್ಲಿ ಯಕ್ಷಗಾನ ಅತ್ಯಂತ ಪ್ರಯೋಜನಕಾರಿ ಎಂದು ಎಂದು ಶಾಸಕ ರವಿ ಸುಬ್ರಹ್ಮಣ್ಯ ಹೇಳಿದರು.
ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ಭಾನುವಾರ ಸೃಷ್ಟಿ ಕಲಾ ವಿದ್ಯಾಲಯದ 23ನೇ ಸೃಷ್ಟಿ ಸಂಭ್ರಮ ಅಂಗವಾಗಿ ಪ್ರಸಿದ್ಧ ಚೆಂಡೆವಾದಕ ಶ್ರೀನಿವಾಸ ಪ್ರಭು( ಗುಂಡ) ಅವರಿಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಸೃಷ್ಟಿ ಕಲಾವಿದ್ಯಾಲಯವು ನಿರಂತರ ಯಕ್ಷಗಾನ ತರಬೇತಿ, ಕಲಾಸೇವೆ ಮೂಲಕ ಬಸವನ ಗುಡಿ ಕ್ಷೇತ್ರದ ಗೌರವವನ್ನು ಹೆಚ್ಚಿಸಿದೆ ಎಂದರು.
ಪ್ರಶಸ್ತಿ ಸ್ವೀಕರಿಸಿದ ಶ್ರೀನಿವಾಸ ಪ್ರಭು, ಸೃಷ್ಟಿಯ ಈ ಪ್ರಶಸ್ತಿ ನನ್ನ ಕಲಾ ಬದುಕಿನಲ್ಲಿ ಅತ್ಯಂತ ಮಹತ್ವದ್ದು ಹಾಗೂ ಮರೆಯಲಾರದ್ದು ಎಂದರು.


ಸೃಷ್ಟಿ ಅಧ್ಯಕ್ಷ ಛಾಯಾಪತಿ ಕಂಚಿಬೈಲ್, ಗೌರವಾಧ್ಯಕ್ಷ ಶ್ರೀಕಾಂತ್ ಎಂ.ಜಿ., ಕಲಾವಿದರುಗಳಾದ ಸುಬ್ರಾಯ ಹೆಬ್ಬಾರ್, ಅಕ್ಷಯ ಆಚಾರ್ಯ ನಿತ್ಯಾನಂದ ನಾಯಕ್ , ಅರ್ಜುನ್ ಕೊರ್ಡೇಲ್, ಭರತ್ ರಾಜ್ ಪರ್ಕಳ ಇದ್ದರು.
ಈ ಸಂದರ್ಭ ಸುಬ್ರಾಯ ಹೆಬ್ಬಾರ್‌ ಮತ್ತು ಭರತ್‌ ರಾಜ್‌ ಪರ್ಕಳ ನಿರ್ದೇಶನದಲ್ಲಿ, ನಿತ್ಯಾನಂದ ನಾಯಕ್‌ ಪರಿಕಲ್ಪನೆಯಲ್ಲಿ ಸೃಷ್ಟಿ ಕಲಾ ವಿದ್ಯಾಲಯ ವಿದ್ಯಾರ್ಥಿಗಳಿಂದ ಕುಮಾರ ವಿಜಯ ಯಕ್ಷಗಾನ ಪ್ರದರ್ಶನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು