5:20 PM Monday3 - November 2025
ಬ್ರೇಕಿಂಗ್ ನ್ಯೂಸ್
Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ

ಇತ್ತೀಚಿನ ಸುದ್ದಿ

ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯ: ಎಂಸಿಎ ವಿದ್ಯಾರ್ಥಿಗಳ 2ನೇ ಬ್ಯಾಚ್‌ಗೆ ಓರಿಯಂಟೇಶನ್ ಕಾರ್ಯಕ್ರಮ

25/07/2024, 19:13

ಬೆಂಗಳೂರು(reporterkarnataka.com): ಇಲ್ಲಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿಗಳ ಎರಡನೇ ಬ್ಯಾಚ್‌ನ ಓರಿಯಂಟೇಶನ್ ಇತ್ತೀಚೆಗೆ ನಡೆಯಿತು.


ಸ್ಕೂಲ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಡೀನ್ ಮತ್ತು ನಿರ್ದೇಶಕರಾದ ಫಾದರ್ ಡೆನ್ಜಿಲ್ ಲೋಬೋ ಎಸ್.ಜೆ. ಅವರು ನೂತನ ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಕೋರುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಅವರು ಸ್ವಾಮಿ ವಿವೇಕಾನಂದರನ್ನು ಉಲ್ಲೇಖಿಸಿ, “ನೀವು ನಿಮ್ಮಲ್ಲಿ ನಂಬಿಕೆಯನ್ನು ಹೊಂದಿರಬೇಕು, ಏಕೆಂದರೆ ಆ ನಂಬಿಕೆಯು ಆಂತರಿಕ ದೈವತ್ವವನ್ನು ನೀಡುತ್ತದೆ. ನೀವು ಏನು ಬೇಕಾದರೂ ಮಾಡಬಹುದು; ನಿಮಗೆ ನಂಬಿಕೆ ಇಲ್ಲದಿದ್ದಾಗ ಮಾತ್ರ ನೀವು ವಿಫಲರಾಗುತ್ತೀರಿ,” ಎಂದರು.
ಫಾ. ಡೆನ್ಜಿಲ್ ಅವರು ಸ್ನಾತಕೋತ್ತರ ಅಧ್ಯಯನದ ಸವಾಲುಗಳನ್ನು ಸ್ವೀಕರಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮದ ಮಹತ್ವವನ್ನು ತಿಳಿ ಹೇಳಿದರು.
ಜಾಗತಿಕವಾಗಿ ಜೆಸ್ಯೂಟ್ ಸಂಸ್ಥೆಗಳ ಇತಿಹಾಸವನ್ನು ಪ್ರಸ್ತುತಪಡಿಸಿ, ಜೆಸ್ಯೂಟ್ ಶೈಕ್ಷಣಿಕ ತತ್ತ್ವಶಾಸ್ತ್ರವನ್ನು ವಿವರಿಸಿದರು.
ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ. ಮೆಲ್ವಿನ್ ಕೊಲಾಕೊ ಅವರು ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಡಾ. ಮೋಹನದಾಸ SJU ನಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ವಿವರಿಸಿದರು.
ವಿದ್ಯಾರ್ಥಿ ಸಂಯೋಜಕರಾದ ಜಾನ್ ವಿಸ್ಟನ್, ಸಂಸ್ಥೆಯ ಚಟುವಟಿಕೆಗಳಲ್ಲಿ ಭಾಗವಹಿಸುವ ಪ್ರಯೋಜನಗಳ ವಿವರವನ್ನು ನೀಡಿದರು. ಡಾ.ಮುಯಿನ್ ಪಾಷಾ ಅವರು ಗಣ್ಯರು, ವಿದ್ಯಾರ್ಥಿಗಳು ಮತ್ತು ಅತಿಥಿಗಳನ್ನು ಓರಿಯಂಟೇಶನ್ ಕಾರ್ಯಕ್ರಮಕ್ಕೆ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು