2:55 AM Sunday26 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯ: ಎಂಸಿಎ ವಿದ್ಯಾರ್ಥಿಗಳ 2ನೇ ಬ್ಯಾಚ್‌ಗೆ ಓರಿಯಂಟೇಶನ್ ಕಾರ್ಯಕ್ರಮ

25/07/2024, 19:13

ಬೆಂಗಳೂರು(reporterkarnataka.com): ಇಲ್ಲಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿಗಳ ಎರಡನೇ ಬ್ಯಾಚ್‌ನ ಓರಿಯಂಟೇಶನ್ ಇತ್ತೀಚೆಗೆ ನಡೆಯಿತು.


ಸ್ಕೂಲ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಡೀನ್ ಮತ್ತು ನಿರ್ದೇಶಕರಾದ ಫಾದರ್ ಡೆನ್ಜಿಲ್ ಲೋಬೋ ಎಸ್.ಜೆ. ಅವರು ನೂತನ ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಕೋರುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಅವರು ಸ್ವಾಮಿ ವಿವೇಕಾನಂದರನ್ನು ಉಲ್ಲೇಖಿಸಿ, “ನೀವು ನಿಮ್ಮಲ್ಲಿ ನಂಬಿಕೆಯನ್ನು ಹೊಂದಿರಬೇಕು, ಏಕೆಂದರೆ ಆ ನಂಬಿಕೆಯು ಆಂತರಿಕ ದೈವತ್ವವನ್ನು ನೀಡುತ್ತದೆ. ನೀವು ಏನು ಬೇಕಾದರೂ ಮಾಡಬಹುದು; ನಿಮಗೆ ನಂಬಿಕೆ ಇಲ್ಲದಿದ್ದಾಗ ಮಾತ್ರ ನೀವು ವಿಫಲರಾಗುತ್ತೀರಿ,” ಎಂದರು.
ಫಾ. ಡೆನ್ಜಿಲ್ ಅವರು ಸ್ನಾತಕೋತ್ತರ ಅಧ್ಯಯನದ ಸವಾಲುಗಳನ್ನು ಸ್ವೀಕರಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮದ ಮಹತ್ವವನ್ನು ತಿಳಿ ಹೇಳಿದರು.
ಜಾಗತಿಕವಾಗಿ ಜೆಸ್ಯೂಟ್ ಸಂಸ್ಥೆಗಳ ಇತಿಹಾಸವನ್ನು ಪ್ರಸ್ತುತಪಡಿಸಿ, ಜೆಸ್ಯೂಟ್ ಶೈಕ್ಷಣಿಕ ತತ್ತ್ವಶಾಸ್ತ್ರವನ್ನು ವಿವರಿಸಿದರು.
ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ. ಮೆಲ್ವಿನ್ ಕೊಲಾಕೊ ಅವರು ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಡಾ. ಮೋಹನದಾಸ SJU ನಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ವಿವರಿಸಿದರು.
ವಿದ್ಯಾರ್ಥಿ ಸಂಯೋಜಕರಾದ ಜಾನ್ ವಿಸ್ಟನ್, ಸಂಸ್ಥೆಯ ಚಟುವಟಿಕೆಗಳಲ್ಲಿ ಭಾಗವಹಿಸುವ ಪ್ರಯೋಜನಗಳ ವಿವರವನ್ನು ನೀಡಿದರು. ಡಾ.ಮುಯಿನ್ ಪಾಷಾ ಅವರು ಗಣ್ಯರು, ವಿದ್ಯಾರ್ಥಿಗಳು ಮತ್ತು ಅತಿಥಿಗಳನ್ನು ಓರಿಯಂಟೇಶನ್ ಕಾರ್ಯಕ್ರಮಕ್ಕೆ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು