12:16 PM Sunday19 - April 2026
ಬ್ರೇಕಿಂಗ್ ನ್ಯೂಸ್
ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ…

ಇತ್ತೀಚಿನ ಸುದ್ದಿ

ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯ: ಎಂಸಿಎ ವಿದ್ಯಾರ್ಥಿಗಳ 2ನೇ ಬ್ಯಾಚ್‌ಗೆ ಓರಿಯಂಟೇಶನ್ ಕಾರ್ಯಕ್ರಮ

25/07/2024, 19:13

ಬೆಂಗಳೂರು(reporterkarnataka.com): ಇಲ್ಲಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿಗಳ ಎರಡನೇ ಬ್ಯಾಚ್‌ನ ಓರಿಯಂಟೇಶನ್ ಇತ್ತೀಚೆಗೆ ನಡೆಯಿತು.


ಸ್ಕೂಲ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಡೀನ್ ಮತ್ತು ನಿರ್ದೇಶಕರಾದ ಫಾದರ್ ಡೆನ್ಜಿಲ್ ಲೋಬೋ ಎಸ್.ಜೆ. ಅವರು ನೂತನ ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಕೋರುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಅವರು ಸ್ವಾಮಿ ವಿವೇಕಾನಂದರನ್ನು ಉಲ್ಲೇಖಿಸಿ, “ನೀವು ನಿಮ್ಮಲ್ಲಿ ನಂಬಿಕೆಯನ್ನು ಹೊಂದಿರಬೇಕು, ಏಕೆಂದರೆ ಆ ನಂಬಿಕೆಯು ಆಂತರಿಕ ದೈವತ್ವವನ್ನು ನೀಡುತ್ತದೆ. ನೀವು ಏನು ಬೇಕಾದರೂ ಮಾಡಬಹುದು; ನಿಮಗೆ ನಂಬಿಕೆ ಇಲ್ಲದಿದ್ದಾಗ ಮಾತ್ರ ನೀವು ವಿಫಲರಾಗುತ್ತೀರಿ,” ಎಂದರು.
ಫಾ. ಡೆನ್ಜಿಲ್ ಅವರು ಸ್ನಾತಕೋತ್ತರ ಅಧ್ಯಯನದ ಸವಾಲುಗಳನ್ನು ಸ್ವೀಕರಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮದ ಮಹತ್ವವನ್ನು ತಿಳಿ ಹೇಳಿದರು.
ಜಾಗತಿಕವಾಗಿ ಜೆಸ್ಯೂಟ್ ಸಂಸ್ಥೆಗಳ ಇತಿಹಾಸವನ್ನು ಪ್ರಸ್ತುತಪಡಿಸಿ, ಜೆಸ್ಯೂಟ್ ಶೈಕ್ಷಣಿಕ ತತ್ತ್ವಶಾಸ್ತ್ರವನ್ನು ವಿವರಿಸಿದರು.
ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ. ಮೆಲ್ವಿನ್ ಕೊಲಾಕೊ ಅವರು ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಡಾ. ಮೋಹನದಾಸ SJU ನಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ವಿವರಿಸಿದರು.
ವಿದ್ಯಾರ್ಥಿ ಸಂಯೋಜಕರಾದ ಜಾನ್ ವಿಸ್ಟನ್, ಸಂಸ್ಥೆಯ ಚಟುವಟಿಕೆಗಳಲ್ಲಿ ಭಾಗವಹಿಸುವ ಪ್ರಯೋಜನಗಳ ವಿವರವನ್ನು ನೀಡಿದರು. ಡಾ.ಮುಯಿನ್ ಪಾಷಾ ಅವರು ಗಣ್ಯರು, ವಿದ್ಯಾರ್ಥಿಗಳು ಮತ್ತು ಅತಿಥಿಗಳನ್ನು ಓರಿಯಂಟೇಶನ್ ಕಾರ್ಯಕ್ರಮಕ್ಕೆ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು