3:46 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯ: ಎಂಸಿಎ ವಿದ್ಯಾರ್ಥಿಗಳ 2ನೇ ಬ್ಯಾಚ್‌ಗೆ ಓರಿಯಂಟೇಶನ್ ಕಾರ್ಯಕ್ರಮ

25/07/2024, 19:13

ಬೆಂಗಳೂರು(reporterkarnataka.com): ಇಲ್ಲಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿಗಳ ಎರಡನೇ ಬ್ಯಾಚ್‌ನ ಓರಿಯಂಟೇಶನ್ ಇತ್ತೀಚೆಗೆ ನಡೆಯಿತು.


ಸ್ಕೂಲ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಡೀನ್ ಮತ್ತು ನಿರ್ದೇಶಕರಾದ ಫಾದರ್ ಡೆನ್ಜಿಲ್ ಲೋಬೋ ಎಸ್.ಜೆ. ಅವರು ನೂತನ ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಕೋರುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಅವರು ಸ್ವಾಮಿ ವಿವೇಕಾನಂದರನ್ನು ಉಲ್ಲೇಖಿಸಿ, “ನೀವು ನಿಮ್ಮಲ್ಲಿ ನಂಬಿಕೆಯನ್ನು ಹೊಂದಿರಬೇಕು, ಏಕೆಂದರೆ ಆ ನಂಬಿಕೆಯು ಆಂತರಿಕ ದೈವತ್ವವನ್ನು ನೀಡುತ್ತದೆ. ನೀವು ಏನು ಬೇಕಾದರೂ ಮಾಡಬಹುದು; ನಿಮಗೆ ನಂಬಿಕೆ ಇಲ್ಲದಿದ್ದಾಗ ಮಾತ್ರ ನೀವು ವಿಫಲರಾಗುತ್ತೀರಿ,” ಎಂದರು.
ಫಾ. ಡೆನ್ಜಿಲ್ ಅವರು ಸ್ನಾತಕೋತ್ತರ ಅಧ್ಯಯನದ ಸವಾಲುಗಳನ್ನು ಸ್ವೀಕರಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮದ ಮಹತ್ವವನ್ನು ತಿಳಿ ಹೇಳಿದರು.
ಜಾಗತಿಕವಾಗಿ ಜೆಸ್ಯೂಟ್ ಸಂಸ್ಥೆಗಳ ಇತಿಹಾಸವನ್ನು ಪ್ರಸ್ತುತಪಡಿಸಿ, ಜೆಸ್ಯೂಟ್ ಶೈಕ್ಷಣಿಕ ತತ್ತ್ವಶಾಸ್ತ್ರವನ್ನು ವಿವರಿಸಿದರು.
ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ. ಮೆಲ್ವಿನ್ ಕೊಲಾಕೊ ಅವರು ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಡಾ. ಮೋಹನದಾಸ SJU ನಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ವಿವರಿಸಿದರು.
ವಿದ್ಯಾರ್ಥಿ ಸಂಯೋಜಕರಾದ ಜಾನ್ ವಿಸ್ಟನ್, ಸಂಸ್ಥೆಯ ಚಟುವಟಿಕೆಗಳಲ್ಲಿ ಭಾಗವಹಿಸುವ ಪ್ರಯೋಜನಗಳ ವಿವರವನ್ನು ನೀಡಿದರು. ಡಾ.ಮುಯಿನ್ ಪಾಷಾ ಅವರು ಗಣ್ಯರು, ವಿದ್ಯಾರ್ಥಿಗಳು ಮತ್ತು ಅತಿಥಿಗಳನ್ನು ಓರಿಯಂಟೇಶನ್ ಕಾರ್ಯಕ್ರಮಕ್ಕೆ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು