8:31 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬೆಂಗಳೂರು ಕಾಲ್ತುಳಿತ: ಮೃತ ಶಿವಲಿಂಗನ‌ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರ

09/06/2025, 23:35

ಶಿವು ರಾಠೋಡ ಯಾದಗಿರಿ

info.reporterjarnataka@gmail.cm

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ್ತಕ್ಕೆ ಬಲಿಯಾದ ಯಾದಗಿರಿ ಜಿಲ್ಲೆಯ ಹೊನಗೇರಾದ ಶಿವಲಿಂಗನ ಕುಟುಂಬಕ್ಕೆ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು 25 ಲಕ್ಷ ರೂ.ಗಳ ಚೆಕ್ ವಿತರಿಸಿದರು.
ಶಿವಲಿಂಗನ ತಂದೆ ಚಂದಪ್ಪ, ತಾಯಿ ಲಕ್ಷ್ಮಿ, ಅಣ್ಣ ಹೊನ್ನಪ್ಪ ಅವರನ್ನು ಸಚಿವರು ಮಾತಾಡಿ ಘಟನೆ ಬಗ್ಗೆ ವಿಷಾದ ವ್ಯಕ್ತ ಪಡಿಸಿ ಮಗನನ್ನು ತಂದು ಕೊಡಲು ಯಾರಿಂದಲ್ಲೂ ಸಾಧ್ಯವಿಲ್ಲ. ಕಾರಣ ಇನ್ನೊಬ್ಬ ಮಗ ಹೊನ್ನಪ್ಪನಲ್ಲಿಯೇ ಶಿವಲಿಂಗನನ್ನು ಕಾಣುವ ಮೂಲಕ ನೆಮ್ಮದಿ ಜೀವನ ನಡೆಸಿರಿ. ಹಣದ ಸದ್ಬಳಕೆ ಮಾಡಿಕೊಳ್ಳಿ ಎಂದು ಹೇಳಿದರು.
ನಡೆಯಬಾರದ್ದು ನಡೆದಿದೆ ವಿಧಿಯಾಟ, ಎದೆಗುಂದದೆ ಬದುಕು ಸಾಗಿಸಿ, ನಿಮ್ಮ ಇನ್ನೊಬ್ಬ ಮಗನಿಗೆ ಇಲ್ಲಿನ‌ ಮೆಡಿಕಲ್ ಕಾಲೇಜಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೌಕರಿ ಕೊಡಿಸುವ ಭರವಸೆ ನೀಡಿದರು.
ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ಮಾತನಾಡಿ, ಸರ್ಕಾರದ ಈ ಪರಿಹಾರದ ಹಣ ಪೊಲಾಗಿಸದೆ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲಿ ಎಂದರು.
ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನುರು, ಜಿಲ್ಲಾಧಿಕಾರಿ ಡಾ.ಸುಶೀಲಾ, ಹೆಚ್ಚುವರಿ ಡಿಸಿ ಶರಣಬಸಪ್ಪ ಕೋಟಪ್ಪಗೋಳ, ಎಸಿ ಡಾ.ಹಂಪಣ್ಣ ಸಜ್ಜನ್ ಸೇರಿದಂತೆಯೇ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು