6:48 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಬೆಂಗಳೂರು: ಸ್ತುತಿ ರಂಗಪ್ರವೇಶ; ಶಾಸ್ತ್ರೀಯ ಭರತನಾಟ್ಯದ ಪಯಣ ಆರಂಭ

26/08/2024, 18:58

ಬೆಂಗಳೂರು(reporterkarnataka.com):ಸಾಂಸ್ಕೃತಿಕ ಕ್ಷೇತ್ರದ ತವರು ಎಂದೇ ಬಿಂಬಿತವಾಗಿರುವ ಐಟಿ ಸಿಟಿ ಬೆಂಗಳೂರಿನಲ್ಲಿ ಪ್ರತಿದಿನ ಹತ್ತಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಹೊಸ ಹೊಸ ಕಲಾವಿದರಿಗೆ ಹಲವಾರು ವೇದಿಕೆಗಳು ಸಜ್ಜುಗೊಂಡಿರುತ್ತವೆ. ಇಂತಹ ಹೊಸ ಕಲಾವಿದೆ ಸ್ತುತಿ ಅವರಿಗೆ ಜಯನಗರದಲ್ಲಿರುವ ಜೆಎಸ್ಎಸ್ ಸಭಾಂಗಣ ಒಂದು ಉತ್ತಮ ವೇದಿಕೆಯನ್ನು ಕಲ್ಪಿಸಿಕೊಟ್ಟಿತು.
ಸ್ತುತಿ ಅವರ ಭರತನಾಟ್ಯ ರಂಗಪ್ರವೇಶಕ್ಕೆ ಈ ಸಭಾಂಗಣ ವೇದಿಕೆಯಾಯಿತು. ಅನುರಾಗ್ ಕಲಾ ಗುರುಕುಲ ಪ್ರಸ್ತುತಪಡಿಸಿದ ಕಾರ್ಯಕ್ರಮದಲ್ಲಿ ನೆರೆದಿದ್ದ ಸಾವಿರಾರು ಕಲಾ ಪೋಷಕರು ಮತ್ತು ಕಲಾಸಕ್ತರ ಸಮ್ಮುಖದಲ್ಲಿ ಸ್ತುತಿ ಅವರು ಮನೋಜ್ಞವಾದ ಭರತನಾಟ್ಯ ಪ್ರದರ್ಶನದ ಮೂಲಕ ರಂಗಪ್ರವೇಶ ಮಾಡಿ ತಾವೊಬ್ಬ ಪ್ರತಿಭಾನ್ವಿತ ಭರತನಾಟ್ಯ ಕಲಾವಿದೆ ಎಂಬುದನ್ನು ಸಾದರಪಡಿಸಿದರು.
ಗುರು ಪಲ್ಲವಿ ರಾಘವೇಂದ್ರ ಅವರಿಂದ ಭರತನಾಟ್ಯ ಕಲಿತ ಸ್ತುತಿ ಈ ಪ್ರದರ್ಶನದ ಮೂಲಕ ಶಾಸ್ತ್ರೀಯ ಭರತನಾಟ್ಯದ ಪಯಣವನ್ನು ಆರಂಭಿಸಿದರು. ಪಲ್ಲವಿ ರಾಘವೇಂದ್ರ ಅವರು ಕಳೆದ ಹಲವು ವರ್ಷಗಳಿಂದ ಕಲಿಸಿಕೊಟ್ಟ ಭರತನಾಟ್ಯದ ಅನೇಕ ಮಜಲುಗಳನ್ನು ಪ್ರದರ್ಶಿಸುವ ಮೂಲಕ ಸ್ತುತಿ ಎಲ್ಲರ ಗಮನ ಸೆಳೆದಿದ್ದೇ ಅಲ್ಲದೆ ಮೆಚ್ಚುಗೆಗೆ ಪಾತ್ರರಾದರು. ಅವರು ಹಾಕಿದ ಪ್ರತಿಯೊಂದು ಹೆಜ್ಜೆಯೂ ಶಾಸ್ತ್ರೀಯ ಕಲಾ ಪ್ರಕಾರಕ್ಕೆ ಹಿಡಿದ ಕನ್ನಡಿಯಂತಿದ್ದು, ಕಲೆಯ ಮೇಲಿನ ಅವರ ಶ್ರದ್ಧೆಯನ್ನು ತೋರಿಸಿತು.


ಮೈಸೂರಿನ ಫೈನ್ ಆರ್ಟ್ಸ್ ವಿಶ್ವವಿದ್ಯಾಲಯ ಕಾಲೇಜಿನ ನೃತ್ಯ ವಿಭಾಗದ ಮುಖ್ಯಸ್ಥರು ಮತ್ತು ಪ್ರೊಫೆಸರ್ ಡಾ.ಕೆ.ಕುಮಾರ್, ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ ನ ವಲಯ ನಿರ್ದೇಶಕ ಪ್ರದೀಪ್ ಕುಮಾರ್, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ವಯೋಲಿನ್ ವಾದಕರಾದ ವಿದ್ವಾನ್ ಆರ್.ಕುಮಾರೇಶ್ ಮತ್ತು ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹಾಗೂ ಪ್ರಖ್ಯಾತ ವೀಣಾವಾದಕಿ ಡಾ.ಜಯಂತಿ ಕುಮಾರೇಶ್ ಅವರು ಸ್ತುತಿ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಉದಯೋನ್ಮುಖ ಕಲಾವಿದೆಗೆ ಆಶೀರ್ವದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು