8:13 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಬೆಂಗಳೂರು: ಸ್ತುತಿ ರಂಗಪ್ರವೇಶ; ಶಾಸ್ತ್ರೀಯ ಭರತನಾಟ್ಯದ ಪಯಣ ಆರಂಭ

26/08/2024, 18:58

ಬೆಂಗಳೂರು(reporterkarnataka.com):ಸಾಂಸ್ಕೃತಿಕ ಕ್ಷೇತ್ರದ ತವರು ಎಂದೇ ಬಿಂಬಿತವಾಗಿರುವ ಐಟಿ ಸಿಟಿ ಬೆಂಗಳೂರಿನಲ್ಲಿ ಪ್ರತಿದಿನ ಹತ್ತಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಹೊಸ ಹೊಸ ಕಲಾವಿದರಿಗೆ ಹಲವಾರು ವೇದಿಕೆಗಳು ಸಜ್ಜುಗೊಂಡಿರುತ್ತವೆ. ಇಂತಹ ಹೊಸ ಕಲಾವಿದೆ ಸ್ತುತಿ ಅವರಿಗೆ ಜಯನಗರದಲ್ಲಿರುವ ಜೆಎಸ್ಎಸ್ ಸಭಾಂಗಣ ಒಂದು ಉತ್ತಮ ವೇದಿಕೆಯನ್ನು ಕಲ್ಪಿಸಿಕೊಟ್ಟಿತು.
ಸ್ತುತಿ ಅವರ ಭರತನಾಟ್ಯ ರಂಗಪ್ರವೇಶಕ್ಕೆ ಈ ಸಭಾಂಗಣ ವೇದಿಕೆಯಾಯಿತು. ಅನುರಾಗ್ ಕಲಾ ಗುರುಕುಲ ಪ್ರಸ್ತುತಪಡಿಸಿದ ಕಾರ್ಯಕ್ರಮದಲ್ಲಿ ನೆರೆದಿದ್ದ ಸಾವಿರಾರು ಕಲಾ ಪೋಷಕರು ಮತ್ತು ಕಲಾಸಕ್ತರ ಸಮ್ಮುಖದಲ್ಲಿ ಸ್ತುತಿ ಅವರು ಮನೋಜ್ಞವಾದ ಭರತನಾಟ್ಯ ಪ್ರದರ್ಶನದ ಮೂಲಕ ರಂಗಪ್ರವೇಶ ಮಾಡಿ ತಾವೊಬ್ಬ ಪ್ರತಿಭಾನ್ವಿತ ಭರತನಾಟ್ಯ ಕಲಾವಿದೆ ಎಂಬುದನ್ನು ಸಾದರಪಡಿಸಿದರು.
ಗುರು ಪಲ್ಲವಿ ರಾಘವೇಂದ್ರ ಅವರಿಂದ ಭರತನಾಟ್ಯ ಕಲಿತ ಸ್ತುತಿ ಈ ಪ್ರದರ್ಶನದ ಮೂಲಕ ಶಾಸ್ತ್ರೀಯ ಭರತನಾಟ್ಯದ ಪಯಣವನ್ನು ಆರಂಭಿಸಿದರು. ಪಲ್ಲವಿ ರಾಘವೇಂದ್ರ ಅವರು ಕಳೆದ ಹಲವು ವರ್ಷಗಳಿಂದ ಕಲಿಸಿಕೊಟ್ಟ ಭರತನಾಟ್ಯದ ಅನೇಕ ಮಜಲುಗಳನ್ನು ಪ್ರದರ್ಶಿಸುವ ಮೂಲಕ ಸ್ತುತಿ ಎಲ್ಲರ ಗಮನ ಸೆಳೆದಿದ್ದೇ ಅಲ್ಲದೆ ಮೆಚ್ಚುಗೆಗೆ ಪಾತ್ರರಾದರು. ಅವರು ಹಾಕಿದ ಪ್ರತಿಯೊಂದು ಹೆಜ್ಜೆಯೂ ಶಾಸ್ತ್ರೀಯ ಕಲಾ ಪ್ರಕಾರಕ್ಕೆ ಹಿಡಿದ ಕನ್ನಡಿಯಂತಿದ್ದು, ಕಲೆಯ ಮೇಲಿನ ಅವರ ಶ್ರದ್ಧೆಯನ್ನು ತೋರಿಸಿತು.


ಮೈಸೂರಿನ ಫೈನ್ ಆರ್ಟ್ಸ್ ವಿಶ್ವವಿದ್ಯಾಲಯ ಕಾಲೇಜಿನ ನೃತ್ಯ ವಿಭಾಗದ ಮುಖ್ಯಸ್ಥರು ಮತ್ತು ಪ್ರೊಫೆಸರ್ ಡಾ.ಕೆ.ಕುಮಾರ್, ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ ನ ವಲಯ ನಿರ್ದೇಶಕ ಪ್ರದೀಪ್ ಕುಮಾರ್, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ವಯೋಲಿನ್ ವಾದಕರಾದ ವಿದ್ವಾನ್ ಆರ್.ಕುಮಾರೇಶ್ ಮತ್ತು ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹಾಗೂ ಪ್ರಖ್ಯಾತ ವೀಣಾವಾದಕಿ ಡಾ.ಜಯಂತಿ ಕುಮಾರೇಶ್ ಅವರು ಸ್ತುತಿ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಉದಯೋನ್ಮುಖ ಕಲಾವಿದೆಗೆ ಆಶೀರ್ವದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು